ಅನ್ನಭಾಗ್ಯ ಅಕ್ಕಿ ಸಮರ್ಪಕ ಪೂರೈಕೆಯಾಗಲಿ

blank

ಹುಬ್ಬಳ್ಳಿ: ಅನ್ನಭಾಗ್ಯದ ಅಕ್ಕಿಯು ನ್ಯಾಯಬೆಲೆ ಅಂಗಡಿಗಳಿಗೆ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಇದರ ಬಗ್ಗೆ ಗಮನ ಹರಿಸಬೇಕೆಂದು ನ್ಯಾಯಬೆಲೆ ಅಂಗಡಿಕಾರರು ಮನವಿ ಮಾಡಿದ್ದಾರೆ.

ನಗರದಲ್ಲಿರುವ ಶಾಸಕ ಮಹೇಶ ಟೆಂಗಿನಕಾಯಿ ಅವರ ನಿವಾಸಕ್ಕೆ ತೆರಳಿ ಅಕ್ಕಿ ವಿತರಣೆಯಲ್ಲಿನ ಸಮಸ್ಯೆಗಳ ಬಗ್ಗೆ ದೂರು ನೀಡಿದರು.

ನ್ಯಾಯಬೆಲೆ ಅಂಗಡಿಕಾರರು ಹಾಗೂ ಸಾರ್ವಜನಿಕರ ಸಮಸ್ಯೆ ಆಲಿಸಿದ ಶಾಸಕರು, ಧಾರವಾಡ ಹಾಗೂ ಸ್ಥಳಿಯ ಆಹಾರ ಇಲಾಖೆಯ ಅಧಿಕಾರಿಗಳಿಗೆ ಫೋನ್ ಮುಖಾಂತರ ಮಾತನಾಡಿದರು.

ಎಫ್ ಸಿಐ ಗುತ್ತಿಗೆದಾರರಿಂದ ಅಕ್ಕಿ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿದೆ ಎಂದು ಅಧಿಕಾರಿಗಳು ಶಾಸಕರ ಗಮನಕ್ಕೆ ತಂದರು.
ಏನೇ ಸಮಸ್ಯೆ ಇದ್ದರೂ ಅದನ್ನು ಸರಿಪಡಿಸಿ ಸಮರ್ಪಕ ಅಕ್ಕಿ ಪೂರೈಸುವಂತೆ ಶಾಸಕರು ಸೂಚಿಸಿದರು.

ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಯಾವುದೇ ತೊಂದರೆ ಆಗಬಾರದು. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೂ ವ್ಯವಸ್ಥೆ ಸರಿಪಡಿಸಲು ಸೂಚಿಸಲಾಗಿದೆ ಎಂದು ಅಂಗಡಿಕಾರಾರಿಗೆ ತಿಳಿಸಿದರು.

Share This Article

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…

ನಿಮ್ಮ ಮುಖದಲ್ಲಿ ಬೇಡದ ಕೂದಲು ಇದೆಯೇ? ಈ ಸಲಹೆಗಳನ್ನು ಅನುಸರಿಸಿ..Unwanted Hair

Unwanted Hair : ಮುಖದ ಮೇಲೆ ಬೇಡದ ಕೂದಲು ಸಾಮಾನ್ಯ ಆದರೆ ಮಹಿಳೆಯರಿಗೆ ಮುಜುಗರದ ಸಮಸ್ಯೆಯಾಗಿದೆ.…

ಕೇವಲ 2 ಚಮಚ ಉಪ್ಪು ಇದ್ದರೆ ಸಾಕು ಮನೆಗೆ ಇರುವೆ, ಜಿರಳೆ ಬರದಂತೆ ತಡೆಯಬಹುದು..| Salt

Salt: ಉಪ್ಪು ಅಡಿಗೆಗೆ ರುಚಿಯನ್ನು ಮಾತ್ರ ನೀಡುವುದಿಲ್ಲ, ಅದು ನಿಮ್ಮ ಅಡುಗೆ ಮನೆಯ ಸ್ವಚ್ಛತೆಗೂ ಸಹಾಯ…