ಸಾಹಿತ್ಯ ಸಮ್ಮೇಳನ ದಿನಾಂಕ ಪ್ರಕಟಿಸಲು ಮನವಿ

blank

ಹಾವೇರಿ: ಹಾವೇರಿಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಆಯೋಜನೆಗೆ ಶೀಘ್ರವೇ ದಿನಾಂಕ ಪ್ರಕಟಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್​ನ ಜಿಲ್ಲಾ ಘಟಕದ ವತಿಯಿಂದ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭಾನುವಾರ ಹುಬ್ಬಳ್ಳಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ಈ ಬಾರಿ ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಬೇಕು ಎಂದು ಹಿಂದಿನ ಸಮ್ಮೇಳನದಲ್ಲಿ ಪ್ರಕಟಿಸಲಾಗಿದೆ. ಆದರೆ, ಕರೊನಾ ಹಿನ್ನೆಲೆಯಲ್ಲಿ ಸಮ್ಮೇಳನ ನಡೆಸುವ ಕುರಿತು ಈವರೆಗೂ ಯಾವುದೇ ದಿನಾಂಕ ಘೊಷಿಸಿಲ್ಲ. ಆದ್ದರಿಂದ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿರುವ ತಾವು ಕೂಡಲೆ ಈ ಬಗ್ಗೆ ರ್ಚಚಿಸಿ, ಸಮ್ಮೇಳನ ದಿನಾಂಕ ಘೊಷಿಸಬೇಕು. ಇದರಿಂದ ಮುಂದಿನ ತಯಾರಿ ಮಾಡಿಕೊಳ್ಳಲು ಅನುಕೂಲವಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮನವಿ ಸ್ವೀಕರಿಸಿದ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರ ನೇತೃತ್ವದಲ್ಲಿ ಶೀಘ್ರದಲ್ಲಿಯೇ ಸಭೆ ಕರೆದು ಸಮ್ಮೇಳನ ನಡೆಸುವ ಬಗ್ಗೆ ರ್ಚಚಿಸಲಾಗುವುದು. ನಂತರ ದಿನಾಂಕ ಪ್ರಕಟಿಸಲು ತಿಳಿಸಲಾಗುವುದು ಎಂದು ಭರವಸೆ ನೀಡಿದರು.

ಕಸಾಪ ಜಿಲ್ಲಾಧ್ಯಕ್ಷ ಎಚ್.ಬಿ. ಲಿಂಗಯ್ಯ, ತಾಲೂಕು ಅಧ್ಯಕ್ಷ ವೈ.ಬಿ. ಆಲದಕಟ್ಟಿ, ಶಿಗ್ಗಾಂವಿ ತಾಲೂಕು ಅಧ್ಯಕ್ಷ ನಾಗರಾಜ ದ್ಯಾಮನಕೊಪ್ಪ, ಬ್ಯಾಡಗಿ ತಾಲೂಕು ಅಧ್ಯಕ್ಷ ಬಿ.ಎಂ. ಜಗಾಪೂರ, ಸವಣೂರ ಅಧ್ಯಕ್ಷ ಪ್ರಭು ಅರಗೋಳ, ಎಸ್.ಎಂ. ಜಿಗಳಿ ಮತ್ತಿತರರು ಉಪಸ್ಥಿತರಿದ್ದರು.

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…