ನವದೆಹಲಿ: ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 1923 ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ.
ಬಿಡುಗಡೆಯಾಗಿರುವ ಆರನೇ ಪಟ್ಟಿಯಲ್ಲಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಬೆಂಬಲಿಗರಾದ ಮಹೇಶ್ ಜೋಶಿ, ಶಾಂತಿ ಧರಿವಾಲ್ ಹಾಗೂ ಧರ್ಮೆಂದ್ರ ರಾಥೋರ್ಗೆ ಟಿಕೆಟ್ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನಿರಾಕರಿಸಿದೆ. ಈ ಮೂಲಕ ಅಶೋಕ್ ಗೆಹ್ಲೋಟ್ ಬಣದ ವಿರುದ್ಧ ಸಚಿನ್ ಪೈಲಟ್ ಮೇಲುಗೈ ಸಾಧಿಸಿದಂತಾಗಿದೆ.
ಕಳೆದ ವರ್ಷ ಅಶೋಕ್ ಗೆಹ್ಲೋಟ್ ಎಐಸಿಸಿ ಅಧ್ಯಕ್ಷರಾಗುವುದು ಖಚಿತವಾಗುತ್ತಿದ್ದಂತೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕಾಗಿತ್ತು. ಅಶೋಕ್ ಗೆಹ್ಲೋಟ್ ರಾಜೀನಾಮೆ ವದಂತಿ ಬೆನ್ನಲ್ಲೇ ಈ ಮೂವರು ನಾಯಕರು ಸಸಿನ್ ಪೈಲಟ್ರನ್ನು ಸಿಎಂ ಮಾಡದಂತೆ ಬಂಡಾಯ ಎದ್ದಿದ್ದರು ಮತ್ತು ಶಾಸಕಾಂಗ ಸಭೆ ನಡೆಸುವಂತೆ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡಬ ಹೇರಿದ್ದರು. ಇದಲ್ಲದೆ ಅಂದಿನ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿದ್ದ ಅಜಯ್ ಮಾಕೆನ್ ಅವರ ರಾಜೀನಾಮೆಗೂ ಈ ಮೂವರು ಪ್ರಮುಖ ಕಾರಣಕರ್ತರೆಂದು ಹೇಳಲಾಗಿದೆ. ಈ ಕಾರಣಕ್ಕೆ ಟಿಕೆಟ್ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಕೆ; ಪ್ರಮುಖ ಆರೋಪಿ ಎಲ್ಷಿಶ್ ಯಾದವ್ನನ್ನು ಬಂಧಿಸಿ ಬಿಡುಗಡೆ ಮಾಡಿದ ಪೊಲೀಸರು
200 ಸದಸ್ಯಬಲದ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ 178 ಅಭ್ಯರ್ಥಿಗಳನ್ನು ಘೋಷಿಸಿದ್ದು, 21 ಅಭ್ಯರ್ಥಿಗಳನ್ನು ಪ್ರಕಟಿಸಬೇಕಿದೆ. 1 ಸೀಟನ್ನು ಮಿತ್ರಪಕ್ಷ ಆರ್ಎಲ್ಡಿಗೆ ಕಾಂಗ್ರೆಸ್ ಬಿಟ್ಟುಕೊಟ್ಟಿದೆ. 105 ಹಾಲಿ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, 12 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದೆ. 24 ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.
ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.