More

    ಪ್ರತಿಯೊಬ್ಬರಲ್ಲೂ ಇರಲಿ ವಿಮರ್ಶಾತ್ಮಕ ಗುಣ : ಗೋಪಿನಾಥ್ ಎಸ್.

    ವಿಜಯವಾಣಿ ಸುದ್ದಿಜಾಲ ಕಾರ್ಕಳ

    ವಿದ್ಯಾರ್ಥಿ ಜೀವನದಲ್ಲಿ ವಿವಿಧ ಬಗೆಯ ಸಂಶೋಧನಾ ಪ್ರಯತ್ನ ನಡೆಸುವುದು ಕಲಿಕೆಯ ಪ್ರಮುಖ ಅಂಗ. ಪ್ರತಿಯೊಬ್ಬರಲ್ಲೂ ವಿಮರ್ಶಾತ್ಮಕ ಚಿಂತನೆಯ ಗುಣ ಇರಬೇಕು. ಸಾಮಾನ್ಯ ಜನರಿಗೆ ಉಪಯುಕ್ತವಾಗುವ ಮಾದರಿಗಳು ಹೆಚ್ಚು ಅಭಿವೃದ್ದಿಗೊಳ್ಳಬೇಕು ಎಂದು ನಿಟ್ಟೆ ತಾಂತ್ರಿಕ ಕಾಲೇಜಿನ ಸಲಹೆಗಾರ ಹಾಗೂ ಬಿಎಚ್‌ಇಎಲ್ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಗೋಪಿನಾಥ್ ಎಸ್. ಹೇಳಿದರು.

    ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಹಳೇ ವಿದ್ಯಾರ್ಥಿ ಸಂಘ ‘ವಿನಮಿತ’ದ ಸಹಯೋಗದೊಂದಿಗೆ ಅಂತಿಮ ಬಿ.ಇ ವಿದ್ಯಾರ್ಥಿಗಳ ಪ್ರಾಜೆಕ್ಟ್ ಪ್ರದರ್ಶನ ನಿಟ್ಟೆ ಎಕ್ಸ್‌ಪೋ ಉದ್ಘಾಟಿಸಿ ಮಾತನಾಡಿದರು.

    ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್ ಮಾತನಾಡಿ, ಇಂದು ನಾವು ಅಭಿವೃದ್ಧಿಪಡಿಸಲು ಚಿಂತಿಸುತ್ತಿರುವ ತಂತ್ರಜ್ಞಾನ ಕೇವಲ ಕಾಲ್ಪನಿಕ ಎಂದು ಭಾಸವಾದರೂ ಮುಂದೊಂದು ದಿನ ಪ್ರಾಮುಖ್ಯತೆ ಪಡೆದುಕೊಳ್ಳುವ ಪ್ರಾಜೆಕ್ಟ್ ಆಗಿ ಹೊರಹೊಮ್ಮಬಹುದು. ನಮ್ಮ ಐಡಿಯಾಗಳನ್ನು ಕಾರ್ಯರೂಪಕ್ಕೆ ತರುವ ಚಿಂತನೆ ಅಗತ್ಯ ಎಂದರು.

    ಇದೇ ಸಂದರ್ಭ ಎಕ್ಸ್‌ಪ್ರೋ ಅಬ್ಸ್‌ಟ್ರಾೃಕ್ಟ್ ವಾಲ್ಯೂಮ್-22 ಅನ್ನು ಬಿಡುಗಡೆಗೊಳಿಸಲಾಯಿತು. ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಉಪಪ್ರಾಂಶುಪಾಲ ಡಾ.ಐ.ಆರ್.ಮಿತ್ತಂತಾಯ ಉಪಸ್ಥಿತರಿದ್ದರು.

    ಎಕ್ಸ್‌ಪೋ ಸಂಯೋಜಕ, ಮೆಕಾನಿಕಲ್ ವಿಭಾಗದ ಪ್ರಾಧ್ಯಾಪಕ ಡಾ.ಮಲ್ಲಿಕಪ್ಪಾ ಸ್ವಾಗತಿಸಿದರು. ಇಲೆಕ್ಟ್ರಾನಿಕ್ಸ್ ಹಾಗೂ ಕಮ್ಯೂನಿಕೇಶನ್ ವಿಭಾಗದ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ವಂದಿಸಿದರು. ಬಯೋಟೆಕ್ನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಹರ್ಷಿತಾ ಜತ್ತನ್ನ ಕಾರ್ಯಕ್ರಮ ನಿರೂಪಿಸಿದರು. ಪ್ರಾಜೆಕ್ಟ್ ಪ್ರದರ್ಶನದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ವಿವಿಧ ಇಂಜಿನಿಯರಿಂಗ್ ವಿಭಾಗದ ಒಟ್ಟು 305 ಪ್ರಾಜೆಕ್ಟ್‌ಗಳು ಪ್ರದರ್ಶನಗೊಂಡಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts