ವೀರಾಂಜನೇಯಸ್ವಾಮಿ ದೇವಾಲಯದ ವಾರ್ಷಿಕ ಮಹೋತ್ಸವ

blank

ಅರಕಲಗೂಡು: ತಾಲೂಕಿನ ಶಣವಿನಕುಪ್ಪೆ ಗ್ರಾಮದಲ್ಲಿ ಇತ್ತೀಚೆಗೆ ಇತಿಹಾಸ ಪ್ರಸಿದ್ಧ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ವಾರ್ಷಿಕ ಮಹೋತ್ಸವ ಹಾಗೂ ಕಾರ್ತಿಕ ದೀಪೋತ್ಸವ ನಡೆಯಿತು.

blank

ಪುರಾತನ ಕಾಲದ ಶ್ರೀ ವೀರಾಂಜನೇಯಸ್ವಾಮಿ ದೇವಾಲಯ ಶಿಥಿಲಗೊಂಡಿದ್ದರಿಂದ ಗ್ರಾಮಸ್ಥರು ಹಾಗೂ ದಾನಿಗಳ ಸಹಕಾರದಿಂದ ನೂತನ ದೇವಾಲಯ ಸ್ಥಾಪಿಸಿ ಉದ್ಘಾಟನೆ ಭಾಗ್ಯ ಕಂಡು ವರ್ಷ ಪೂರೈಸಿತ್ತು. ಈ ಹಿನ್ನಲೆಯಲ್ಲಿ ದೇವಸ್ಥಾನದಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆ, ಮಹಾ ಮಂಗಳಾರತಿ ಹಾಗೂ ಕಾರ್ತಿಕ ದೀಪೋತ್ಸವ ನಡೆಯಯಿತು. ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಸಂಜೆ ಮನರಂಜನಾ ಕಾರ್ಯಕ್ರಮ ನಡೆಯಿತು.

blank

ದೊಡ್ಡ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಗ್ರಾಮಸ್ಥರು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು. ಶ್ರೀ ವೀರಭದ್ರೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಸಂತೋಷ್, ಊರಿನ ಮುಖಂಡರಾದ ನಂಜುಂಡಪ್ಪ, ರಾಜಣ್ಣ, ನಿಂಗರಾಜು, ರಾಜೇಗೌಡ, ಅರ್ಚಕ ನಂದೀಶ, ಹೇಮಂತಕುಮಾರ್ ಅವರನ್ನು ಗೌರವಿಸಲಾಯಿತು.

 

 

Share This Article

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…

ಪೋಷಕರೇ ಹುಷಾರ್‌! ಯಾವುದೇ ಕಾರಣಕ್ಕೂ ಮಕ್ಕಳ ಮುಂದೆ ಈ 5 ವಿಚಾರ ಮಾತನಾಡಲೇಬೇಡಿ… Parents Tips

Parents Tips : ಮಕ್ಕಳಿರುವ ಮನೆ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಆರು ವರ್ಷದವರೆಗೆ…

ಮಿದುಳಿನ ಆರೋಗ್ಯ ರಕ್ಷಣೆಗೆ ನಾವೇನು ಮಾಡಬೇಕು?

ಇಂದು ಕೃತಕ ಬುದ್ಧಿಮತ್ತೆ ಕೂಡ ನಮ್ಮ ಕೈಯಲ್ಲಿದೆ. ಆದರೆ ದುರದೃಷ್ಟವಶಾತ್ ನಮ್ಮ ಮಿದುಳಿನ ಆರೋಗ್ಯ ದಿನೇ…