ಸುರೇಬಾನ: ಸ್ಥಳೀಯ ಎಸ್ಎ್ಎಸ್ ಶಿಕ್ಷಣ ಸಮಿತಿಯ ಲಾಹಾರ ಶಿವಯೋಗೀಶ್ವರ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 14ನೇ ವಾರ್ಷಿಕ ಸ್ನೇಹ ಸಮ್ಮೇಳನ ಮಂಗಳವಾರ ಜರುಗಿತು.
ಸ್ಥಳೀಯ ಪೊಲೀಸ್ ಠಾಣೆಯ ಪಿಎಸ್ಐ ಎಸ್.ಎಚ್. ಪವಾರ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ರಸ್ತೆ ಸುರಕ್ಷತಾ ನಿಯಮಗಳ ಮಾಹಿತಿ ನೀಡಿದರು. ಎಲ್ಲ ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಶುಭ ಹಾರೈಸಿದರು.
ಶ್ರೀಮಠದ ಶಿವಮೂರ್ತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಎಸ್.ಎಸ್. ಬೂದಿಹಾಳಮಠ ಅಧ್ಯಕ್ಷತೆ ವಹಿಸಿದ್ದರು. ಆರ್.ಪಿ. ಕಮ್ಮಾರ, ಸಂಗಳ ಹಿರೇಮಠ, ಡಿ.ಎಂ ಕೀರಗೌಡ, ವಿದ್ಯಾರ್ಥಿನಿ ಪ್ರತಿನಿಧಿ ಭೀಮಾಂಬಿಕಾ ಪಾಟೀಲ ಇತರರು ಇದ್ದರು.