ಬೆಂಗಳೂರು: ಸದ್ಯ ಭಾರಿ ಸುದ್ದಿಯಲ್ಲಿರುವ 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಬೆನ್ನಿಗೇ ಮತ್ತೊಂದು ಪಿಎಸ್ಐ ನೇಮಕಾತಿಯಲ್ಲೂ ಅಕ್ರಮ ನಡೆದಿರುವ ಕುರಿತ ಮಾಹಿತಿ ಬೆಳಕಿಗೆ ಬಂದಿದೆ. ಈ ಅಕ್ರಮಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಗೆ ಪತ್ರಮುಖೇನ ದೂರು ಸಲ್ಲಿಸಿದ್ದಾರೆ.
ವಿಶೇಷವೆಂದರೆ ಈಗಾಗಲೇ ಒಂದು ಪ್ರಕರಣದಲ್ಲಿ ಆರೋಪಿ ಆಗಿರುವ ದಿವ್ಯಾ ಹಾಗರಗಿ ಹೆಸರೇ ಈ ನೇಮಕಾತಿ ಅಕ್ರಮದಲ್ಲೂ ಕೇಳಿ ಬಂದಿದೆ. ಯಾದಗಿರಿಯ ಶ್ರೀನಿವಾಸ ಕಟ್ಟಿ ಎನ್ನುವವರು ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ದೂರು ಸಲ್ಲಿಸಿದ್ದಾರೆ.
2016-17ರ ಬ್ಯಾಚ್ನ 59 ಪಿಎಸ್ಐ ನೇಮಕಾತಿಯಲ್ಲೂ ಅಕ್ರಮದ ನಡೆದಿದೆ. ಅದರಲ್ಲಿ ದಿವ್ಯಾ ಹಾಗರಗಿ ಹಾಗೂ ಆರ್.ಡಿ.ಪಾಟೀಲ್ ಶಾಮೀಲಾಗಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ, ಬ್ಲೂಟೂಥ್ ಡಿವೈಸ್ ಮೂಲಕ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿರುವ ಕಟ್ಟಿ, ಈ ಅಕ್ರಮದಲ್ಲಿ ಲಕ್ಷಾಂತರ ರೂ. ನೀಡಿ 16 ಮಂದಿ ಪಿಎಸ್ಐ ಆಗಿ ಕರ್ತವ್ಯದಲ್ಲಿರುವವರ ಹೆಸರು, ಮೊಬೈಲ್ಫೋನ್ ನಂಬರ್ ಕೂಡ ದೂರಿನಲ್ಲಿ ಲಗತ್ತಿಸಿದ್ದಾರೆ. 59 ಮಂದಿ ಪಿಎಸ್ಐ ಅಭ್ಯರ್ಥಿಗಳ ಪಟ್ಟಿ ತೆಗೆಸಿ ಸಿಐಡಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ದಿವ್ಯಾ ಹಾಗರಗಿ ಸೇರಿ 6 ಆರೋಪಿಗಳಿಗೆ ಅರೆಸ್ಟ್ ವಾರಂಟ್ ಜಾರಿ; ಪಿಎಸ್ಐ ನೇಮಕ ಅಕ್ರಮ ಪ್ರಕರಣ