ಮತ್ತೊಂದು ಪಿಎಸ್​ಐ ನೇಮಕಾತಿಯಲ್ಲೂ ಅಕ್ರಮ?; ಇಲ್ಲೂ ದಿವ್ಯಾ ಹಾಗರಗಿ ಕೈವಾಡ!

ಬೆಂಗಳೂರು: ಸದ್ಯ ಭಾರಿ ಸುದ್ದಿಯಲ್ಲಿರುವ 545 ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದ ಬೆನ್ನಿಗೇ ಮತ್ತೊಂದು ಪಿಎಸ್​ಐ ನೇಮಕಾತಿಯಲ್ಲೂ ಅಕ್ರಮ ನಡೆದಿರುವ ಕುರಿತ ಮಾಹಿತಿ ಬೆಳಕಿಗೆ ಬಂದಿದೆ. ಈ ಅಕ್ರಮಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಗೆ ಪತ್ರಮುಖೇನ ದೂರು ಸಲ್ಲಿಸಿದ್ದಾರೆ. ವಿಶೇಷವೆಂದರೆ ಈಗಾಗಲೇ ಒಂದು ಪ್ರಕರಣದಲ್ಲಿ ಆರೋಪಿ ಆಗಿರುವ ದಿವ್ಯಾ ಹಾಗರಗಿ ಹೆಸರೇ ಈ ನೇಮಕಾತಿ ಅಕ್ರಮದಲ್ಲೂ ಕೇಳಿ ಬಂದಿದೆ. ಯಾದಗಿರಿಯ ಶ್ರೀನಿವಾಸ ಕಟ್ಟಿ ಎನ್ನುವವರು ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ದೂರು ಸಲ್ಲಿಸಿದ್ದಾರೆ. … Continue reading ಮತ್ತೊಂದು ಪಿಎಸ್​ಐ ನೇಮಕಾತಿಯಲ್ಲೂ ಅಕ್ರಮ?; ಇಲ್ಲೂ ದಿವ್ಯಾ ಹಾಗರಗಿ ಕೈವಾಡ!