ಬೆಂಗಳೂರು: ಲೋಕಸಭಾ ಚುನಾವಣಾ ಸೋಲಿನ ಬಳಿಕ ಜೆಡಿಎಸ್ ಚಟುವಟಿಕೆಯಲ್ಲಿ ಸಕ್ರಿಯವಾಗಿ ಕಾಣಿಸಿಕೊಳ್ಳದ ಜೆಡಿಎಸ್ ಮುಖಂಡ ಮಧುಬಂಗಾರಪ್ಪ, ಕಾರ್ಯಕರ್ತರ ವಿಶ್ವಾಸವನ್ನು ಜೆಡಿಎಸ್ ಕಳೆದುಕೊಂಡಿದೆ ಎಂದು ಕಳೆದ ವರ್ಷ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು.
ಆ ಮೂಲಕ ಪಕ್ಷಾಂತರ ಮಾಡುವ ಗುಮಾನಿ ಮೂಡಿಸಿದ್ದ ಮಧುಬಂಗಾರಪ್ಪ, ಇದೀಗ ಜೆಡಿಎಸ್ ತೊರೆದು ಕಾಂಗ್ರೆಸ್ ಮನೆಗೆ ಕಾಲಿಡುವ ಕಾಲ ಸನಿಹದಲ್ಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಇಂದು(ಗುರುವಾರ) ಕೆಲ ಕಾಲ ಮಧುಬಂಗಾರಪ್ಪ ಸಮಾಲೋಚನೆ ನಡೆಸಿದರು. ಇದನ್ನೂ ಓದಿರಿ ಆಂಜನೇಯ ದೇಗುಲಕ್ಕೆ ಬೆಂಕಿ ಇಟ್ಟು ವಿಕೃತಿ ಮೆರೆದ ಕಿಡಿಗೇಡಿಗಳು!
ಮಧು ಬಂಗಾರಪ್ಪ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಮುಂದಿನ ವಾರದಲ್ಲಿಯೇ… ಎಂದು ಡಿಕೆಶಿ ತಿಳಿಸಿದರು. ನನ್ನ ಮಗಳ ಮದುವೆ ಮುಗಿದ ಬಳಿಕ ಪಕ್ಷ ಸೇರ್ಪಡೆ ದಿನಾಂಕ ನಿಗದಿಗೊಳಿಸಲಾಗುವುದು ಎಂದು ಡಿಕೆಶಿ ಹೇಳಿದರು.
ಜೆಡಿಎಸ್ ಇನ್ಆ್ಯಕ್ಟಿವ್ ಪಕ್ಷ, ನಾನು ಅದರ ಇನ್ಆ್ಯಕ್ಟಿವ್ ಕಾರ್ಯಾಧ್ಯಕ್ಷ: ಮಧುಬಂಗಾರಪ್ಪ ಹೀಗೆ ಹೇಳಿದ್ದೇಕೆ?!
ತಹಸೀಲ್ದಾರ್ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!
ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು