ನವದೆಹಲಿ : ಕುಸ್ತಿಪಟು ಸಾಗರ್ ಧನ್ಕರ್ ಕೊಲೆ ಪ್ರಕರಣದಲ್ಲಿ ದೆಹಲಿ ಅಪರಾಧ ವಿಭಾಗ ಪೊಲೀಸರು ಮತ್ತೊಬ್ಬ ಕುಸ್ತಿ ಆಟಗಾರನನ್ನು ಬಂಧಿಸಿದ್ದಾರೆ. ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಪ್ರಮುಖ ಆರೋಪಿಯಾಗಿರುವ ಈ ಪ್ರಕರಣದಲ್ಲಿ ಈವರೆಗೆ 10 ಜನರನ್ನು ಬಂಧಿಸಲಾಗಿದೆ.
ದೆಹಲಿ ನಿವಾಸಿ ಅನಿರುದ್ಧ್ ಎಂಬುವ ಬಂಧಿತನಾಗಿದ್ದು, ಸುಶೀಲ್ಕುಮಾರ್ ಹೇಳಿದಂತೆ ಮೃತ ಸಾಗರ್ ಧನಕರ್ಅನ್ನು ಥಳಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಾಜಿ ಜೂನಿಯರ್ ಚಾಂಪಿಯನ್ ಆಗಿದ್ದ ಧನಕರ್ನನ್ನು ಮೇ 5 ರಂದು ಛತ್ರಸಾಲ್ ಕ್ರೀಡಾಂಗಣದಲ್ಲಿ ಸುಶೀಲ್ ಕುಮಾರ್ ಮತ್ತು ಸಹಚರರು ಗುಂಪಾಗಿ ಹೊಡೆದು ಸಾಯಿಸಿದ್ದರೆಂದು ಆರೋಪಿಸಲಾಗಿದೆ. (ಏಜೆನ್ಸೀಸ್)
ಡೇಟಿಂಗ್ ಆ್ಯಪ್ ಮೂಲಕ ಪುಸಲಾಯಿಸಿ ಕರೆದರು, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದರು!