ಭಯೋತ್ಪಾದನಾ ವಿರೋಧಿ ಅಭಿಯಾನ; ಪಾಕಿಸ್ತಾನವನ್ನು ಜಗತ್ತಿಗೆ ಬಹಿರಂಗಪಡಿಸುತ್ತೇನೆ; ಅಸಾದುದ್ದೀನ್ ಓವೈಸಿ| Oyc

ಹೈದರಾಬಾದ್: ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ನಂತರ, AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಜಾಗತಿಕ ಮಟ್ಟದಲ್ಲಿ ಜಾಗೃತಿ ಮೂಡಿಸಲು ರಚಿಸಲಾದ ಕೇಂದ್ರದ ಸರ್ವಪಕ್ಷ ನಿಯೋಗಗಳಲ್ಲಿ ತಾವು ಭಾಗವಹಿಸುವುದಾಗಿ ಹೇಳಿಕೊಂಡಿದ್ದಾರೆ. ಈ ಭೇಟಿಯ ಸಮಯದಲ್ಲಿ, ಪಾಕಿಸ್ತಾನದ ಉದ್ದೇಶಗಳನ್ನು ವಿದೇಶಿ ಸರ್ಕಾರಗಳಿಗೆ ಬಹಿರಂಗಪಡಿಸುವುದಾಗಿ ಹೇಳಿದ್ದಾರೆ.

ಓವೈಸಿ ಹೇಳಿದ್ದೇನು.?

ಮಾಜಿ ಅಧ್ಯಕ್ಷ ಮುಹಮ್ಮದ್ ಜಿಯಾ-ಉಲ್-ಹಕ್ ಕಾಲದಿಂದಲೂ ಭಾರತ, ಪಾಕಿಸ್ತಾನದ ಭಯೋತ್ಪಾದನೆಯ ಬಲಿಪಶುವಾಗಿದೆ. ಕಂದಹಾರ್ ವಿಮಾನ ಅಪಹರಣ, 26/11 ಮುಂಬೈ ದಾಳಿ, 2001 ರ ಸಂಸತ್ತಿನ ದಾಳಿ, ಉರಿ ಮತ್ತು ಪಠಾಣ್‌ಕೋಟ್ ಘಟನೆಗಳು ಮತ್ತು ಇತ್ತೀಚೆಗೆ ರಿಯಾಸಿ ಮತ್ತು ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಹತ್ಯೆಗಳು ಸೇರಿದಂತೆ ಈ ಇತಿಹಾಸದ ಬಗ್ಗೆ ನಾವು ಜಗತ್ತಿಗೆ ತಿಳಿಸಬೇಕು. ಇದು ಮಾನವೀಯತೆಗೆ ಬೆದರಿಕೆಯಾಗಿದೆ ಎಂದು ಓವೈಸಿ ಪಿಟಿಐಗೆ ತಿಳಿಸಿದರು.

ಇದನ್ನೂ ಓದಿ: ಪಾಕ್ ಬಣ್ಣ ಬಯಲು ಮಾಡಲು ಸರ್ವಪಕ್ಷ ನಿಯೋಗ; ಶೀಘ್ರದಲ್ಲೇ ವಿದೇಶಕ್ಕೆ ತೆರಳಲಿರೋ ಸಂಸದರು| All-party delegation

ಪಾಕಿಸ್ತಾನವು ತನ್ನನ್ನು ಇಸ್ಲಾಮಿಕ್ ರಾಷ್ಟ್ರವೆಂದು ಬಿಂಬಿಸಿಕೊಳ್ಳುವ ಪ್ರಯತ್ನಗಳನ್ನು ಅವರು ಟೀಕಿಸಿದ್ದು, ಭಾರತವು ಸುಮಾರು 200 ಮಿಲಿಯನ್ ಮುಸ್ಲಿಮರಿಗೆ ನೆಲೆಯಾಗಿದೆ ಎಂಬುದನ್ನು ಪ್ರತಿಪಾದಿಸಿದರು. ಯಾವ ಗುಂಪಿಗೆ ನನ್ನನ್ನು ನಿಯೋಜಿಸಲಾಗುವುದು ಅಥವಾ ಯಾರು ಮುನ್ನಡೆಸುತ್ತಾರೆಂದು ನನಗೆ ಇನ್ನೂ ತಿಳಿದಿಲ್ಲ. ಆದರೆ ನಾವು ಭಾರತದ ದೃಷ್ಟಿಕೋನವನ್ನು ಪ್ರಸ್ತುತಪಡಿಸಬೇಕು. ಪಾಕಿಸ್ತಾನ ತನ್ನನ್ನು ಇಸ್ಲಾಮಿಕ್ ರಾಷ್ಟ್ರವಾಗಿ ಗುರುತಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಆದರೆ ಭಾರತವು ಗಮನಾರ್ಹ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿದೆ. ಈ ಸಂಗತಿಯನ್ನು ತಿಳಿಸಬೇಕು ಎಂದು ಅವರು ಹೇಳಿದರು.
ಏಳು ಸಂಸದರು ಏಳು ನಿಯೋಗಗಳ ನೇತೃತ್ವ ವಹಿಸಲಿದ್ದಾರೆ. ಅವರಲ್ಲಿ ಕಾಂಗ್ರೆಸ್‌ನಿಂದ ಶಶಿ ತರೂರ್, ಬಿಜೆಪಿಯಿಂದ ರವಿಶಂಕರ್ ಪ್ರಸಾದ್, ಜೆಡಿಯುನಿಂದ ಸಂಜಯ್ ಕುಮಾರ್ ಝಾ, ಬಿಜೆಪಿಯಿಂದ ಬೈಜಯಂತ್ ಪಾಂಡಾ, ಡಿಎಂಕೆಯಿಂದ ಕನಿಮೋಳಿ ಕರುಣಾನಿಧಿ, ಎನ್‌ಸಿಪಿಯಿಂದ ಸುಪ್ರಿಯಾ ಸುಳೆ ಮತ್ತು ಶಿವಸೇನೆಯ ಏಕನಾಥ್ ಶಿಂಧೆ ಸೇರಿದ್ದಾರೆ.

ಇದನ್ನೂ ಓದಿ:ಪಾಕ್​ ಪರ ಬೇಹುಗಾರಿಕೆ; ಮಹಿಳಾ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿ 6 ಮಂದಿ ಅರೆಸ್ಟ್| Youtuber arrest

ಸರ್ವಪಕ್ಷ ನಿಯೋಗಗಳು ಭಾರತದ ಒಗ್ಗಟ್ಟಿನ ನಿಲುವು ಮತ್ತು ಎಲ್ಲಾ ರೀತಿಯ ಭಯೋತ್ಪಾದನೆಯ ವಿರುದ್ಧ ಹೋರಾಡುವ ಅಚಲ ಬದ್ಧತೆಯನ್ನು ಪ್ರತಿಬಿಂಬಿಸಲಿವೆ. ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆಯ ದೇಶದ ಸ್ಪಷ್ಟ ಸಂದೇಶವನ್ನು ಅವರು ಜಾಗತಿಕ ವೇದಿಕೆಗೆ ಕೊಂಡೊಯ್ಯಲಿದ್ದಾರೆ.
ಭೇಟಿ ವೇಳೆ ಭಾರತ-ಪಾಕಿಸ್ತಾನ ಸಂಘರ್ಷ, ಆಪರೇಷನ್ ಸಿಂಧೂರಕ್ಕೆ ಕಾರಣವಾದ ಅಂಶಗಳು, ಭಯೋತ್ಪಾದನೆಗೆ ಪಾಕಿಸ್ತಾನ ಕುಮ್ಮಕ್ಕು ನೀಡುತ್ತಿರುವ ವಿಚಾರಗಳ ಕುರಿತು ವಿದೇಶಿ ನಾಯಕರಿಗೆ ವಿವರಣೆ ನೀಡಲಿದ್ದಾರೆ. ಈ ಮೂಲಕ ಪಾಕಿಸ್ತಾನದ ಬಂಡವಾಳ ಬಯಲು ಮಾಡುವ ಪ್ರಯತ್ನ ನಡೆಸಲಿದ್ದಾರೆ.
(ಏಜೆನ್ಸೀಸ್)

ಪಾಕ್ ಬಣ್ಣ ಬಯಲು ಮಾಡಲು ಸರ್ವಪಕ್ಷ ನಿಯೋಗ; ಶೀಘ್ರದಲ್ಲೇ ವಿದೇಶಕ್ಕೆ ತೆರಳಲಿರೋ ಸಂಸದರು| All-party delegation

Share This Article

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

ಆಹಾರ ಸೇವಿಸುವಾಗ ಪದೇಪದೆ ಕೂದಲು ಕಾಣಿಸುತ್ತಿದಿಯೇ?: ಹಾಗಾದ್ರೆ ಸ್ವಲ್ಪ ಜಾಗರೂಕರಾಗಿ.. ಜ್ಯೋತಿಷ್ಯದಲ್ಲಿ ಹೇಳೋದೇನು? | Eating

Eating: ನಿಮ್ಮ ಆಹಾರದಲ್ಲಿ ಕೂದಲು ಮತ್ತೆ ಮತ್ತೆ ಬರುವುದು. ನಿಮ್ಮ ಆಹಾರದಲ್ಲಿ ಕೂದಲು ಉದುರುವ ಘಟನೆ…