More

    ಜೈಲು ಪಾಲಾಗಲಿದ್ದಾರೆ ಅನುಭವ ಸಿನಿಮಾ ಖ್ಯಾತಿಯ ಅಭಿನಯಾ! ಹೈಕೋರ್ಟ್​ನಿಂದ 2 ವರ್ಷ ಶಿಕ್ಷೆ ಪ್ರಕಟ

    ಬೆಂಗಳೂರು: ಪಾಲಕರ ಜೊತೆ ಸೇರಿ ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪದ ಮೇಲೆ ಅನುಭವ ಸಿನಿಮಾ ಖ್ಯಾತಿಯ ಹಿರಿಯ ನಟಿ ಅಭಿನಯಾ ಅವರಿಗೆ ಹೈಕೋರ್ಟ್​ನಿಂದ ಎರಡು ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ.

    ಅನುಭವ ಸಿನಿಮಾ ತಂದು ಕೊಟ್ಟ ಯಶಸ್ಸಿನ ಬಳಿಕ ಸ್ಟಾರ್​ ನಟಿ ಎನಿಸಿಕೊಂಡಿದ್ದ ಅಭಿನಯಾ ಇದೀಗ ಜೈಲು ಸೇರುವ ಪರಿಸ್ಥಿತಿ ಎದುರಾಗಿದೆ. ತಮ್ಮ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಬೇಡಿಕೆ ಇಟ್ಟು ಪಾಲಕರ ಜೊತೆ ಸೇರಿ ಕಿರುಕುಳ ನೀಡಿರುವ ಆರೋಪದಡಿಯಲ್ಲಿ ಹೈಕೋರ್ಟ್ ಶಿಕ್ಷೆ ಪ್ರಕಟಿಸಿದೆ. ನ್ಯಾಯಮೂರ್ತಿ ಎಚ್​.ಬಿ. ಪ್ರಭಾಕರ್ ಶಾಸ್ತ್ರಿ ಅವರನ್ನೊಳಗೊಂಡ ಏಕಸದಸ್ಯ ಪೀಠದಿಂದ ಆದೇಶ ಹೊರಬಿದ್ದಿದೆ. ಸರ್ಕಾರದ ಪರ ವಕೀಲ ಎಚ್.ವಿ. ವಿನಾಯಕ್ ಅವರು ವಾದ ಮಂಡಿಸಿದ್ದರು.

    ಘಟನೆ ಹಿನ್ನೆಲೆ ಏನು?
    2002ರಲ್ಲಿ ಲಕ್ಷ್ಮೀದೇವಿ ಎಂಬುವವರು ಅಭಿನಯಾ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಅವರನ್ನು ಲಕ್ಷ್ಮೀದೇವಿ ಮದುವೆಯಾಗಿದ್ದರು. ಮದುವೆ ವೇಳೆ ವರಕ್ಷಿಣೆ ಪಡೆದಿದ್ದಲ್ಲದೆ, ನಂತರವೂ ಪದೇಪದೆ ಹಣ ತರುವಂತೆ ಕಿರುಕುಳ ನೀಡುತ್ತಿದ್ದರು. ವಿವಾಹದ ಸಮಯದಲ್ಲಿ 80 ಸಾವಿರ ರೂಪಾಯಿ ಹಾಗೂ 250 ಗ್ರಾಂ ಚಿನ್ನಾಭರಣ ಪಡೆದಿದ್ದರು. ಇದಾದ ನಂತರವೂ 1 ಲಕ್ಷ ರೂ.ಗೆ ಬೇಡಿಕೆ ಇಟ್ಟು 20 ಸಾವಿರ ಪಡೆದ ನಂತರವೂ ಕಿರುಕುಳ ಕೊಡುತ್ತಿದ್ದರು. ಹಣ ಕೊಟ್ಟರೂ ಸಹ ನನ್ನನ್ನು ಪಾಲಕರ ಮನೆಯಲ್ಲಿ ಬಿಟ್ಟಿದ್ದರು ಎಂದು ದೂರಿನಲ್ಲಿ ಲಕ್ಷ್ಮೀದೇವಿ ಆರೋಪಗಳ ಸುರಿಮಳೆಗೈದಿದ್ದರು.

    ಹೆರಿಗೆಗೆ ತವರು ಮನೆಗೆ ಹೋದ ಲಕ್ಷ್ಮೀದೇವಿಯನ್ನ ಮನೆಗೆ ಕರೆತರದ ಅಭಿನಯಾ ಫ್ಯಾಮಿಲಿ, ಗಂಡನ ಮನೆಗೆ ಬಂದ ಲಕ್ಷ್ಮೀ ಹಾಗು ಆಕೆಯ ಪಾಲಕರಿಗೆ ಅವಮಾನ ಮಾಡಿರುವ ಆರೋಪವು ಇದೆ. ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ 2002 ರಲ್ಲಿ ಚಂದ್ರಾಲೇಔಟ್ ಠಾಣೆಗೆ ಲಕ್ಷ್ಮೀದೇವಿ ದೂರು ದಾಖಲಿಸಿದ್ದರು. ಬಳಿಕ ವಿಚಾರಣೆ ನಡೆಸಿ, ಚಂದ್ರಾಲೇಔಟ್ ಪೊಲೀಸರು ಸಲ್ಲಿಸಿದ್ದ ಚಾರ್ಜ್​ಶೀಟ್​ ಆಧರಿಸಿ, ಮ್ಯಾಜಿಸ್ಟ್ರೇಟ್ ಕೋರ್ಟ್ ಎಲ್ಲಾ ಐವರು ಆರೋಪಿಗಳಿಗೂ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟ ಮಾಡಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರೂ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು.

    ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಲಕ್ಷ್ಮೀದೇವಿ ಹಾಗು ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ. ಎ1 ಆರೋಪಿ ಶ್ರೀನಿವಾಸ್ ಹಾಗೂ ಎ 2 ಆರೋಪಿ ರಾಮಕೃಷ್ಣ ಸಾವಿಗೀಡಾಗಿರುವ ಹಿನ್ನಲೆಯಲ್ಲಿ ಮೂವರಿಗೆ ಮಾತ್ರ ಜೈಲು ಶಿಕ್ಷೆ ಪ್ರಕಟಿಸಿದ್ದು, ಅಭಿನಯ ಅವರ ತಾಯಿ ಎ-3 ಆರೋಪಿ ಜಯಮ್ಮಗೆ 5 ವರ್ಷ, ಎ-4 ಆರೋಪಿ ಚಲುವರಾಜ್ ಹಾಗೂ ಎ-5 ಆರೋಪಿ ಅಭಿನಯಾಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಹೈಕೋರ್ಟ್​ ಆದೇಶ ಹೊರಡಿಸಿದೆ. (ದಿಗ್ವಿಜಯ ನ್ಯೂಸ್​)

    ಪರಪುರುಷರ ಜೊತೆ ಸಹಕರಿಸುವಂತೆ ಹಿಂಸೆ ಮಾಡ್ತಿದ್ರು… ಕಣ್ಣೀರಿಡುತ್ತಲೇ ತಾನು ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಲಕ್ಷ್ಮೀದೇವಿ

    ತನ್ನ ಮನೆ ಮುಂದೆ ಹೆಲಿಕಾಪ್ಟರ್​ ಲ್ಯಾಂಡ್​ ಮಾಡಲು ಜಿಲ್ಲಾಧಿಕಾರಿ ಬಳಿ ಅನುಮತಿ ಕೋರಿದ ರೈತ! ಕಾರಣ ಕೇಳಿದ್ರೆ ಹುಬ್ಬೇರುತ್ತೆ

    ರೆಡ್​ಹ್ಯಾಂಡ್​ ಆಗಿ ಸಿಕ್ಕಿಬೀಳ್ತಿದ್ದಂತೆ ಲಂಚದ ಹಣ ನುಂಗಲು ಯತ್ನ! SI ಹೈಡ್ರಾಮಕ್ಕೆ ಅಧಿಕಾರಿಗಳಿಂದ ತಕ್ಕ ಉತ್ತರ

    ಭರತ್​ಗೆ ಗೆಲುವಿನ ವಿಜಯಾನಂದ: ಡಾ. ಆನಂದ ಸಂಕೇಶ್ವರ ಪಾತ್ರದಲ್ಲಿ ನಟಿಸಿರುವ ಭರತ್ ಬೋಪಣ್ಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts