More

    ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು

    ಸಿಇಒ ಡಾ.ಕೆ.ಎನ್.ಅನುರಾಧಾ ಸೂಚನೆ

    ಜಿಪಂ ಸಭಾಂಗಣದಲ್ಲಿ ತ್ರೈಮಾಸಿಕ ಸಭೆ


    ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
    ಸಾಂತ್ವನ ಯೋಜನೆಯಡಿ ದಾಖಲಾಗುವ ವರದಕ್ಷಿಣೆ ಕಿರುಕುಳ, ಲೈಂಗಿಕ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಸೇರಿ ವಿವಿಧ ಬಗೆಯ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ದೇವನಹಳ್ಳಿ ತಾಲೂಕು ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸಾಂತ್ವನ ಕೇಂದ್ರಗಳ ಮೇಲ್ವಿಚಾರಣಾ ಸಮಿತಿ, ಮಹಿಳೆಯರು ಮತ್ತು ಮಕ್ಕಳ ಸಾಗಣೆ ಮತ್ತು ಮಾರಾಟ ನಿಷೇಧ ಸಮಿತಿ, ಬಾಲಭವನ ಸೊಸೈಟಿ ಸಮಿತಿ, ವರದಕ್ಷಿಣೆ ನಿಷೇಧ ಕಾಯ್ದೆ ಅಡಿ ಕಾರ್ಯಾಚರಿಸುತ್ತಿರುವ ಸಮಿತಿಗಳ ಮೊದಲನೇ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು.
    ದೌರ್ಜನ್ಯಕ್ಕೆ ಒಳಪಟ್ಟ ಮಹಿಳೆಯರಿಗೆ ಕಾನೂನು ಸಲಹೆ, ಆರ್ಥಿಕ ನೆರವು, ತಾತ್ಕಾಲಿಕ ಆಶ್ರಯ ರಕ್ಷಣೆ ನೀಡುವ ಜತೆಗೆ ಸ್ವಯಂ ಪ್ರೇರಣೆಯಿಂದ ಜೀವಿಸಲು ಅನುಕೂಲವಾಗುವಂತೆ ತರಬೇತಿ ನೀಡಬೇಕು. ಅಂತಹ ಮಹಿಳೆಯರಿಗೆ ಸಮಾಜದಲ್ಲಿ ಇತರ ಮಹಿಳೆಯರಂತೆ ಧೈರ್ಯವಾಗಿ ಬದುಕಲು, ಸಶಕ್ತರನ್ನಾಗಿ ಮಾಡಲು ಸಾಂತ್ವನ ಯೋಜನೆ ಅಡಿ ದಾಖಲಾಗಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಬೇಕು, ಮಹಿಳೆಯರು ಮತ್ತು ಮಕ್ಕಳ ಸಾಗಣೆ ದುಷ್ಕೃತ್ಯ ತಡೆಗೆ ಹೆಚ್ಚಿನ ಕ್ರಮ ಕೈಗೊಳ್ಳಬೇಕು ಎಂದರು.
    ಇಂಥ ಕೃತ್ಯದಲ್ಲಿ ಸಿಲುಕಿದವರ, ಶೋಷಣೆಗೆ ಒಳಗಾದವರ ರಕ್ಷಣೆ, ಪುನರ್ವಸತಿ, ಕುಟುಂಬಗಳೊಡನೆ ಪುನಃ ವಿಲೀನಗೊಳಿಸುವ ಸಲುವಾಗಿ ಉಜ್ವಲ ಯೋಜನೆ ಜಾರಿಗೆ ತರಲಾಗಿದ್ದು ಈ ಯೋಜನೆ ಅಡಿ ದಾಖಲಾಗಿರುವ ಸಂತ್ರಸ್ತ ಮಹಿಳೆಯರು ಮತ್ತು ಮಕ್ಕಳಿಗೆ ಪುನರ್ವಸತಿ ಕಲ್ಪಿಸಿ, ಮರಳಿ ಮನೆಗೆ ತಲುಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts