blank

ಹತ್ತು ಕೋಟಿ ರೂ ಅನುದಾನಕ್ಕೆ ಮನವಿ: ಪ್ರಗತಿಪರ ಸಂಘಟನೆಗಳ ಮಹಾಒಕ್ಕೂಟದಿಂದ ಒತ್ತಾಯ

Appeal for grant of ten crores Mandya

ಮಂಡ್ಯ: ಸಾತನೂರು ಬಡಾವಣೆಯಲ್ಲಿ ಭಗವಾನ್ ಗೌತಮ ಬುದ್ಧರ ಧಮ್ಮ ಧ್ಯಾನ ಕಟ್ಟಡ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ 10 ಕೋಟಿ ರೂ ಅನುದಾನ ನೀಡಬೇಕು ಎಂದು ಜಿಲ್ಲಾ ಪ್ರಗತಿಪರ ಸಂಘಟನೆಗಳ ಮಹಾ ಒಕ್ಕೂಟದ ಕಾರ್ಯಕರ್ತರು ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ವರ್ಗದ ನಾಲ್ಕು ಲಕ್ಷ ಜನಕ್ಕಿಂತಲೂ ಹೆಚ್ಚು ವಾಸ ಮಾಡುತ್ತಿದ್ದಾರೆ. ಇವರು ಆರ್ಥಿಕವಾಗಿ ಹಿಂದುಳಿದವರಾಗಿದ್ದಾರೆ. ಮೂಲ ಸೌಲಭ್ಯವು ಇವರಿಗೆ ಇಲ್ಲದಾಗಿದೆ. ಈ ಸಂಬಂಧ ಬುದ್ಧ ಭಾರತ ೌಂಡೇಷನ್ ಅವರು ಭಗವಾನ್ ಗೌತಮ ಬುದ್ಧರ ಧಮ್ಮ ಧ್ಯಾನ ಕಟ್ಟಡ ಸೇರಿದಂತೆ ವೃತ್ತಿ ಆಧಾರಿತ ತರಬೇತಿ ಕೇಂದ್ರ ನಿರ್ಮಿಸುತ್ತಿರುವ ಹಿನ್ನಲೆಯಲ್ಲಿ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.
ಈ ಕಟ್ಟಡ ನಿರ್ಮಾಣ ಮಾಡುತ್ತಿರುವ ಉದ್ದೇಶವೇನೆಂದರೆ ಕೂಸಿನ ಮನೆ, ದಾರ್ಶನಿಕರ ಸಮುದಾಯ ಭವನ ನಿರ್ಮಾಣ ಮಾಡಿ ಆರ್ಥಿಕ, ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಇತರೆ ಕ್ಷೇತ್ರಗಳಲ್ಲಿ ಅನುಕೂಲ ಮಾಡಿಕೊಡಲು ತೀರ್ಮಾನಿಸಲಾಗಿದೆ. ಕಟ್ಟಡ ಕಟ್ಟಿಸಿಕೊಡುವುದರಿಂದ ಪರಿಶಿಷ್ಟ ಜಾತಿ, ಶೋಷಿತರು, ಹಿಂದುಳಿದವರು ಧಾರ್ಮಿಕ ಅಲ್ಪಸಂಖ್ಯಾತರರು ಇನ್ನೂ ಅಲ್ಪಸಂಖ್ಯಾತ ಜನರಿಗೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ ಎಂದರು.
ಒಕ್ಕೂಟದ ಹನಕೆರೆ ಗಂಗರಾಜು, ಜೆ.ರಾಮಯ್ಯ, ಸಿದ್ದರಾಜು, ಗಣೇಶ್, ಬಿ.ಹನುಮೇಶ್, ಗುರಪ್ಪ ಇದ್ದರು.

blank
Share This Article

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…

ಎಸಿ, ಫ್ಯಾನ್​ ಇದ್ದರೂ ಬೆವರುತ್ತಿದ್ದೀರಾ?; ತಂಪಿನ ಪ್ರದೇಶದಲ್ಲಿಯೂ ಇಷ್ಟೊಂದು ಹಿಟ್​ ಇರಲು ಕಾರಣವೇನು?: ಇಲ್ಲಿದೆ ಮಾಹಿತಿ | Sweating

Sweating: ಸಾಮಾನ್ಯವಾಗಿ ಬಹುತೇಕರು ಶಕೆಯಲ್ಲಿ ಬೆವರುವುದನ್ನು ಕಾಣುತ್ತೇವೆ. ಆದರೆ, ಇನ್ನು ಕೆಲ ಜನರು ತಾಪಮಾನ 35ಕ್ಕೂ…

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…