ಒತ್ತುವರಿ ತೆರವು ನಿಲ್ಲಿಸಲು ಡಿಎ್ಒಗೆ ಮನವಿ

blank

ಕೊಪ್ಪ: ರೈತರು ಜೀವನೋಪಾಯಕ್ಕಾಗಿ ಒತ್ತುವರಿ ಮಾಡಿಕೊಂಡಿರುವ ಜಾಗದಲ್ಲಿ ಸಾಗುವಳಿ ಮಾಡುತ್ತಿದ್ದು, ಸಲು ಕಾಣುವ ಹೊತ್ತಲ್ಲಿ ಅರಣ್ಯ ಇಲಾಖೆ ಖುಲ್ಲ ಮಾಡುತ್ತಿರುವುದ ಸರಿಯಲ್ಲ .ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಒತ್ತುವರಿ ತೆರವು ಕಾರ್ಯವನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಿಸಾನ್ ಕಾಂಗ್ರೆಸ್ ಘಟಕದಿಂದ ಡಿಎ್ಒ ನಂದೀಶ್‌ಗೆ ಮನವಿ ಸಲ್ಲಿಸಲಾಯಿತು.
ಅನೇಕ ರೈತರು ಒತ್ತುವರಿ ಜಮೀನುಗಳ ಸಕ್ರಮಕ್ಕಾಗಿ ಾರ್ಮ್ 50, 53, 57 ಅಡಿ ಅರ್ಜಿ ಸಲ್ಲಿಸಿದ್ದಾರೆ. ಅರಣ್ಯ ಮತ್ತು ಕಂದಾಯ ಭೂುಮಿಗಳ ಜಂಟಿ ಸರ್ವೇ ಬಾಕಿ ಇದೆ. ಇದರ ಜತೆಗೆ ಸರ್ಕಾರ ಲೀಸ್ ಆಧಾರದ ಒತ್ತುವರಿ ಜಮೀನುಗಳನ್ನು ನೀಡಲು ಮುಂದಾಗಿದೆ. ಈ ವೇಳೆಯಲ್ಲಿ ಇಲಾಖೆ ಒತ್ತುವರಿ ತೆರವಿಗೆ ಮುಂದಾಗಿರುವುದು ಸರಿಯಲ್ಲ. ಇದರಿಂದ ಸರ್ಕಾರದ ಮೇಲೆ ತಪ್ಪು ತಿಳಿವಳಿಕೆ ಮೂಡಲಿದೆ. ಸರ್ಕಾರ ಈ ಮುಜುಗರ ತಪ್ಪಿಸಲು ಜಂಟಿ ಸರ್ವೇ ಪೂರ್ಣಗೊಳಿಸುವವರೆಗೂ ಹಾಗೂಬೆಳೆ ಇರುವ ಕೃಷಿ ಜಮೀನುಗಳನ್ನು ಖುಲ್ಲಾ ಮಾಡದಂತೆ ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಕೆಪಿಸಿಸಿ ಸದಸ್ಯ ಬಾಳೆಮನೆ ನಟರಾಜ್, ಶಶಿಧರ್, ಎಚ್.ಎಂ ಸತೀಶ್, ಎಚ್.ಎಸ್ ಇನೇಶ್, ಡಿ.ಬಿ.ರಾಜೇಂದ್ರ, ಅನ್ನಪೂರ್ಣ ನರೇಶ್, ಆದಿತಿ ಶಾನುವಳ್ಳಿ, ಮುದ್ದಣ್ಣ ಇದ್ದರು.

blank
Share This Article
blank

ನಿಮ್ಮ ಬೆಳಿಗ್ಗೆಯನ್ನು ಹೀಗೆ ಆರಂಭಿಸಿ.. ಈ ಅಭ್ಯಾಸಗಳು ನಿಮ್ಮ ಜೀವನವನ್ನು ಬದಲಾಯಿಸುತ್ತವೆ..! healthy morning

healthy morning: ನಾವು ನಮ್ಮ ಬೆಳಿಗ್ಗೆಯನ್ನು ಹೇಗೆ ಪ್ರಾರಂಭಿಸುತ್ತೇವೆ ಎಂಬುದು ದಿನವಿಡೀ ನಮ್ಮ ಆಲೋಚನೆಗಳು ಮತ್ತು…

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

blank