ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2025-26ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌಧ್ಧ, ಸಿಖ್ ಹಾಗೂ ಫಾರ್ಸಿ, ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಸೌಲಭ್ಯಗಳನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಿಇಟಿ ಪರೀಕ್ಷೆ ಮೂಲಕ ವೃತ್ತಿಪರ ಶಿಕ್ಷಣ ಕೋರ್ಸ್ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳು ಅರಿವು ಯೋಜನೆಯಡಿ ಶೈಕ್ಷಣಿಕ ಸಾಲ ಪಡೆಯಲು ನಿಗಮದ ವೈಬ್ ಸೈಟ್: http://kmdconline.karnataka.gov.in/ನಲ್ಲಿ ಮೇ.23ರೊಳಗಾಗಿ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿದ ನಂತರ ಅರ್ಜಿ ಪ್ರಿಂಟ್ ಔಟ್ ಪಡೆದು ಕ್ಯೂ.ಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತು ್ತಆದಾಯ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಅಂಕಪಟ್ಟಿ, ಆಧಾರ್ಕಾರ್ಡ್ 5 ೆಟೋ ಸಿ.ಇ.ಟಿ. ಹಾಲ್ಟಿಕೆಟ್ ಪ್ರತಿ ಹಾಗೂ ನೋಟರಿ ಮಾಡಿಸಿದ ಛಾಪಾ ಕಾಗದದಲ್ಲಿ ಇಂಡೆಮ್ನಿಟಿ ಬಾಂಡ್ ಸಹಿತ ಎಲ್ಲಾ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ (ನಿ)ಬೆಂಗಳೂರು ನಗರ ಕೇಂದ್ರಿಯ ಜಿಲ್ಲೆ, ಕೊಠಡಿ ಸಂಖ್ಯೆ ಎ್ಎಫ್-29/37, 1ನೇ ಮಹಡಿ, ಹಮೀದ್ ಷಾ ಕಾಂಪ್ಲೆಕ್ಸ್, ಹಲಸೂರು ಗೇಟ್ ಪೊಲೀಸ್ಠಾಣೆ ಹತ್ತಿರ, ಕಬ್ಬನ್ಪೇಟೆ ಮುಖ್ಯರಸ್ತೆ, ಬೆಂಗಳೂರು-560002 ಈ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂ: 080-22114815 ಅಥವಾ 8277799990 ಸಂಪರ್ಕಿಸಬಹುದು.
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್ಗೆ ಅರ್ಜಿ ಆಹ್ವಾನ