ಕುಕನೂರ: ಮಹಿಳೆಯರು ಸ್ತ್ರೀ ರೋಗ ಸಮಸ್ಯೆಗಳ ಬಗ್ಗೆ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕೆಂದು ಕೆಎಸ್ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ.ಸವಿತಾ ತಿಳಿಸಿದರು.
ಇದನ್ನೂ ಓದಿ: BBKS10: ಸಂಗೀತಾ-ಪ್ರತಾಪ್ಗೆ ಚಿಕಿತ್ಸೆ! ಈ ವಾರ ಹೊರ ಹೋಗೋದ್ಯಾರು?
ತಾಲೂಕಿನ ಮಂಗಳೂರು ಗ್ರಾಮದಲ್ಲಿ ಕೊಪ್ಪಳದ ಕೆಎಸ್ ಆಸ್ಪತ್ರೆ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಆಶ್ರಯದಲ್ಲಿ ನಡೆದ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ಶುಕ್ರವಾರ ಮಾತನಾಡಿದರು.
ಸುತ್ತಲಿನ ವಾತಾವರಣ ಸ್ವಚ್ಛತೆ, ನೈರ್ಮಲ್ಯ ಕಾಪಾಡಬೇಕು. ಶುದ್ಧ ನೀರು, ಪೌಷ್ಟಿಕ ಆಹಾರ ಸೇವಿಸಿ. ಆರೋಗ್ಯದಲ್ಲಿ ಸಮಸ್ಯೆಗಳು ಕಂಡು ಬಂದರೆ ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯಬೇಕು ಎಂದರು.
ಡಾ.ಶಶಾಂಕರಡ್ಡಿ, ಡಾ.ಅರ್ಷಿಯಾ, ಡಾ.ಆಫ್ರೀನ್, ಮಾರ್ಕೆಟಿಂಗ್ ಡಿಪಾರ್ಟ್ಮೆಂಟ್ ಪ್ರವೀಣ್ ಶಾಕಿರ್ ಇದ್ದರು.
ಕೆಪಿಎಸ್ ಶಾಲೆಯ ವಿದ್ಯಾರ್ಥಿಗಳು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.