More

    ಎ.22 ಮರಾಟಿ ಸಂರಕ್ಷಣಾ ಸಮಿತಿ ಮಹಾಸಭೆ, ಸಾಧಕರಿಗೆ ಸನ್ಮಾನ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿಯ ವಾರ್ಷಿಕ ಮಹಾಸಭೆ, ಶ್ರೀ ಸತ್ಯನಾರಾಯಣ ಪೂಜೆ, ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಎ.22ರಂದು ಬೆಳಗ್ಗೆ 8ಗಂಟೆಯಿಂದ ಪುತ್ತೂರಿನ ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ಜರುಗಲಿದೆ.


    ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಅಶೋಕ್ ನಾಯ್ಕ ಕೆದಿಲ ಅಧ್ಯಕ್ಷತೆ ವಹಿಸುವರು. ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ ಅಮೈ ದೀಪ ಬೆಳಗಿಸುವರು. ಕರ್ನಾಟಕ ಮರಾಟಿ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ಮಜಕ್ಕಾರ್ ಕೈಪಿಡಿ ಬಿಡುಗಡೆ ಮಾಡುವರು. ತಾಲೂಕು ಮರಾಟಿ ಸಮಾಜ ಸೇವಾ ಸಂಘ ಗಂಜಿಮಠ ಅಧ್ಯಕ್ಷ ಶೇಖರ ಕಡ್ತಲ, ಪೆರ್ಲ ಶ್ರೀ ಶಾರದಾ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾರಿಕ್ಕಾಡು, ಮೆಸ್ಕಾಂ ಪುತ್ತೂರು ಕಾರ್ಯನಿರ್ವಾಹಕ ಅಭಿಯಂತರ ರಾಮಚಂದ ನಾಯ್ಕ, ನ್ಯೂ ಇಂಡಿಯಾ ಅಶ್ಯೂರೆನ್ಸ್ ಡಿವಿಜನಲ್ ಮ್ಯಾನೇಜರ್ ವೇದಾವತಿ ಎನ್., ಮರಾಟಿ ಸಮಾಜ ಸೇವಾ ಸಂಘ ಪೆರ್ಲಂಪಾಡಿ ಅಧ್ಯಕ್ಷ ಪದ್ಮನಾಭ ನಾಯ್ಕ ಸರಸ್ವತಿಮೂಲೆ ಅತಿಥಿಗಳಾಗಿ ಭಾಗವಹಿಸುವರು.


    ಕೃಷಿ ಕ್ಷೇತ್ರದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ ಅವರಿಗೆ ವಿಶೇಷ ಸನ್ಮಾನ, ಕ್ರೀಡಾ, ಶೈಕ್ಷಣಿಕ, ಸಮಾಜಸೇವೆ, ಧಾರ್ಮಿಕ ಸೇವೆ, ಕಲಾ, ವೈದ್ಯಕೀಯ ಮೊದಲಾದ ಕ್ಷೇತ್ರಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts