ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡರು ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಬರಲು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಿವಲಿಂಗೇಗೌಡರನ್ನು ಕಾಂಗ್ರೆಸ್ಗೆ ಸೆಳೆಯುವಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸುರ್ಜೆವಾಲ ಯಶಸ್ವಿಯಾಗಿದ್ದಾರೆ.
ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲು ಶಿವಲಿಂಗೇಗೌಡರು ಮೀನಮೇಷ ಎಣಿಸುತ್ತಿದ್ದರು. ಸಿದ್ದರಾಮಯ್ಯ ಹಲವು ಸುತ್ತಿನ ಮಾತುಕತೆ ನಡೆಸಿದ್ದರು. ಕೊನೆಗೂ ತೆನೆ ಇಳಿಸಿ, ಹಸ್ತ ಹಿಡಿಯಲು ಶಿವಲಿಂಗೇಗೌಡ ಒಪ್ಪಿಗೆ ಸೂಚಿಸಿದ್ದಾರೆ. ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಆಪರೇಷನ್ ಕಾಂಗ್ರೆಸ್ ಈಗ ಸಕ್ಸಸ್ ಆಗಿದೆ ಎಂದು ಎನ್ನಲಾಗಿದೆ.
ಮುಂಬರುವ ವಿಧಾನಸಭಾ ಚುನಾವಣೆ ಸಂದರ್ಭ ಅಂದ್ರೆ 2022ರ ಜನವರಿ ಅಂತ್ಯ ಅಥವಾ ಪೆಬ್ರವರಿಯಲ್ಲಿ ಶಿವಲಿಂಗೇಗೌಡರು ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ ಅಂತೆ.
ಆನೆ ದಂತದಿಂದ ತಯಾರಿಸಿದ ವಾಕಿಂಗ್ ಸ್ಟಿಕ್ ಸೇರಿದಂತೆ ಪುರಾತನ ಕಾಲದ ವಸ್ತುಗಳ ಸಮೇತ ಸಿಸಿಬಿಗೆ ಸಿಕ್ಕಿಬಿದ್ದ ಗ್ಯಾಂಗ್!