ಬೆಂಗಳೂರು: ಹೊಂಬಾಳೆ ಫಿಲಂಸ್ ಸಂಸ್ಥೆಯು ಈಗಾಗಲೇ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಚಿತ್ರ ನಿರ್ಮಾಣ ಮಾಡುತ್ತಿದೆ. ಹಿಂದಿಯಲ್ಲೂ ಹೊಂಬಾಳೆ ಚಿತ್ರ ನಿರ್ಮಾಣ ಮಾಡುವುದಕ್ಕೆ ಸಜ್ಜಾಗುತ್ತಿರುವ ಸುದ್ದಿ ಹಲವು ದಿನಗಳಿಂದಲೇ ಇದೆ. ಈ ಮಧ್ಯೆ, ಶಾರೂಖ್ ಖಾನ್ ಅಭಿನಯದ ಹೊಸ ಚಿತ್ರವೊಂದರ ಮೂಲಕ ಹೊಂಬಾಳೆ ಫಿಲಂಸ್ ಬಾಲಿವುಡ್ಗೆ ಎಂಟ್ರಿ ಕೊಡುತ್ತಿದೆ ಎಂಬ ಸುದ್ದಿಯೊಂದು ಕೇಳಿ ಬರುತ್ತಿದೆ.
ಇದನ್ನೂ ಓದಿ: ವಿದೇಶದಲ್ಲೂ ಜೋರಾಗಿದೆ ‘ವಿಜಯಾನಂದ’ ಚಿತ್ರದ ಹವಾ!
ಹೌದು, ನಾಲ್ಕು ಭಾಷೆಗಳ ನಂತರ ಬಾಲಿವುಡ್ಗೆ ಎಂಟ್ರಿ ಕೊಡುವುದಕ್ಕೆ ಹೊಂಬಾಳೆ ಫಿಲಂಸ್ ಸಂಸ್ಥೆಯು ತಯಾರಿ ನಡೆಸಿದ್ದು, ಅದರ ಮೊದಲ ಹಿಂದಿ ಚಿತ್ರದಲ್ಲಿ ಶಾರೂಖ್ ಖಾನ್ ನಟಿಸುತ್ತಾರಂತೆ. ಅಷ್ಟೇ ಅಲ್ಲದೆ, ಈ ಚಿತ್ರದಲ್ಲಿ ಕನ್ನಡದ ರಕ್ಷಿತ್ ಶೆಟ್ಟಿ ಮತ್ತು ರಿಷಭ್ ಶೆಟ್ಟಿ ಸಹ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯೊಂದು ವೈರಲ್ ಆಗುತ್ತಿದೆ.
ಆದರೆ, ಈ ಸುದ್ದಿ ನಿಜವಾ? ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಮೂಲಗಳ ಪ್ರಕಾರ, ಇದೊಂದು ಗಾಳಿಸುದ್ದಿಯಂತೆ. ಬಾಲಿವುಡ್ಗೆ ಎಂಟ್ರಿ ಕೊಡಲು ಮತ್ತು ಹಿಂದಿ ಚಿತ್ರವೊಂದನ್ನು ನಿರ್ಮಿಸಲು ಹೊಂಬಾಳೆ ತಯಾರಿ ಮಾಡಿಕೊಳ್ಳುತ್ತಿದ್ದರೂ, ಶಾರೂಖ್ ಅಭಿನಯದ ಚಿತ್ರ ನಿರ್ಮಾಣ ಮಾಡುತ್ತಿರುವುದು ಸುಳ್ಳಂತೆ.
ಇದನ್ನೂ ಓದಿ: ಛತ್ರಪತಿ ಶಿವಾಜಿಯಾಗಿ ಅಕ್ಷಯ್ ಕುಮಾರ್ ಹೀಗೆ ಕಾಣ್ತಾರೆ ನೋಡಿ …
ಸದ್ಯಕ್ಕೆ ಹೊಂಬಾಳೆ ಫಿಲಂಸ್ ಗಮನ ತೆಲುಗಿನ ‘ಸಲಾರ್’ ಕಡೆಗಿದೆ. ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್ ಮುಂತಾದ ಪ್ಯಾನ್ ಇಂಡಿಯಾ ನಟರು ನಟಿಸುತ್ತಿರುವ ಈ ಪ್ಯಾನ್ ಇಂಡಿಯಾ ಚಿತ್ರವು 2023ರ ಸೆಪ್ಟೆಂಬರ್ನಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ಚೆನ್ನಾಗಿ ಮಾಡುವ ನಿಟ್ಟಿನಲ್ಲಿ ಹೊಂಬಾಳೆ ಫಿಲಂಸ್ ಗಮನವಿದ್ದು, ಮಿಕ್ಕೆಲ್ಲವೂ ಸುಳ್ಳು ಸುದ್ದಿ ಎಂದು ಹೇಳಲಾಗುತ್ತಿದೆ.
ಹರಿಪ್ರಿಯಾ-ವಸಿಷ್ಠ ಪ್ರೀತಿಗೆ ಕನ್ನಡಿ ಹಿಡಿದಿದ್ದು ಕ್ರಿಸ್ಟಲ್ ಅಂತೆ … ಯಾರು ಈ ಕ್ರಿಸ್ಟಲ್?