More

    ಚೀನಿ ದಾಳಿಯಲ್ಲಿ ಭಾರತದ ಸೇನಾಧಿಕಾರಿ ಮತ್ತು ಇಬ್ಬರು ಯೋಧರು ಹುತಾತ್ಮ

    ನವದೆಹಲಿ: ಗಲ್ವಾನ್​ ಕಣಿವೆ ಪ್ರದೇಶದಲ್ಲಿ ಭಾರತದ ವ್ಯಾಪ್ತಿಯೊಳಗೆ ಅತಿಕ್ರಮಣ ಪ್ರವೇಶ ಮಾಡಿದ್ದ ಚೀನಾ ಪೀಪಲ್ಸ್​ ಲಿಬರೇಷನ್​ ಆರ್ಮಿಯ ಯೋಧರು ದಾಳಿ ಮಾಡಿದ್ದು, ಭಾರತದ ಒಬ್ಬ ಸೇನಾಧಿಕಾರಿ ಮತ್ತು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

    ಲಡಾಖ್​ ಬಿಕ್ಕಟ್ಟನ್ನು ಪರಿಹರಿಸಲು ಭಾರತ ಮತ್ತು ಚೀನಾ ಮಾತುಕತೆ ನಡೆಸಿದ್ದು, ಉಭಯ ರಾಷ್ಟ್ರಗಳು ಸೇನೆಗಳನ್ನು ಹಿಂದಕ್ಕೆ ಕರೆಯಿಸಿಕೊಳ್ಳುತ್ತಿವೆ. ಆದರೆ, ಸೋಮವಾರ ರಾತ್ರಿ ಗಲ್ವಾನ್​ ವ್ಯಾಲಿಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ತಿಕ್ಕಾಟ ಆರಂಭವಾಗಿ, ಚೀನಿಯರು ದಾಳಿ ಮಾಡಿದರು ಎನ್ನಲಾಗಿದೆ.

    ಈ ದಾಳಿಯಲ್ಲಿ ಭಾರತದ ಒಬ್ಬ ಕರ್ನಲ್​ ದರ್ಜೆಯ ಅಧಿಕಾರಿ ಮತ್ತು ಇಬ್ಬರು ಯೋಧರು ಹುತಾತ್ಮರಾದರು ಎಂದು ಸೇನಾಪಡೆ ಮೂಲಗಳು ತಿಳಿಸಿವೆ.

    ಲಡಾಖ್​ ಬಿಕ್ಕಟ್ಟನ್ನು ಶಮನಗೊಳಿಸಲು ಭಾರತ ಮತ್ತು ಚೀನಾದ ಮಿಲಿಟರಿ ಅಧಿಕಾರಿಗಳು ಮಂಗಳವಾರ ಮಾತುಕತೆ ಮುಂದುವರಿಸಿದ್ದಾರೆ ಎಂದು ಹೇಳಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts