ಮುಂಬೈ: ಬಾಲಿವುಡ್ ನಿರ್ದೇಶಕ ಅನುರಾಗ್ ವಿರುದ್ಧ ವಿರುದ್ಧ ಸೂಕ್ತ ಆ್ಯಕ್ಷನ್ ತೆಗೆದುಕೊಳ್ಳಿದಿದ್ದರೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಅವರ ಮೇಲೆ ಅತ್ಯಾಚಾರದ ಆರೋಪ ಹೊರಿಸಿರುವ ನಟಿ ಪಾಯಲ್ ಘೋಶ್ ಸೋಮವಾರವಷ್ಟೇ ಬೆದರಿಕೆ ಹಾಕಿದ್ದರು.
ಈಗ ಅವರ ಬೆನ್ನಿಗೆ ನಿಂತಿರುವ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಸಹ ಅನುರಾಗ್ ಕಶ್ಯಪ್ ಅವರನ್ನು ಏಳು ದಿನಗಳೊಳಗಾಗಿ ಬಂಧಿಸುವುದಕ್ಕೆ ಆಗ್ರಹಿಸಿದ್ದಾರೆ. ಇಲ್ಲವಾದರೆ ಮುಂಬೈನಲ್ಲಿ ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಅಲ್ಲು ಅರ್ಜುನ್ ‘ಪುಷ್ಪ’ ಚಿತ್ರದಲ್ಲಿ ಡಾಲಿ ಧನಂಜಯ ಬದಲಿಗೆ ಈ ಖ್ಯಾತ ನಟ ವಿಲನ್
2013ರಲ್ಲಿ ಅನುರಾಗ್ ಕಶ್ಯಪ್ ತನನ್ನು ವರ್ಸೋವಾದ ತಮ್ಮ ಆಫೀಸಿಗೆ ಕರೆಸಿಕೊಂಡು ಬಹಳ ಕೆಟ್ಟದಾಗಿ ನಡೆಸಿಕೊಂಡಿದ್ದರು ಎಂದು ಪಾಯಲ್ ಇತ್ತೀಚೆಗಷ್ಟೇ ವರ್ಸೋವಾ ಪೊಲೀಸ್ ಸ್ಟೇಶನ್ನಲ್ಲಿ ದೂರು ದಾಖಲಿಸಿದ್ದರು. ಅಷ್ಟೇ ಅಲ್ಲದೆ, ಡ್ರಗ್ಸ್ ಆಕ್ಟ್ನಡಿ ಅನುರಾಗ್ ಕಶ್ಯಪ್ ವಿರುದ್ಧ ಪಾಯಲ್ ಇನ್ನೊಂದು ಕೇಸನ್ನು ದಾಖಲಿಸಿದ್ದರು. ಆದರೆ, ವರ್ಸೋವಾ ಪೊಲೀಸರು ಇನ್ನೂ ಅನುರಾಗ್ ಅವರನ್ನು ಕರೆದು ವಿಚಾರಣೆ ಮಾಡಿಲ್ಲ.
ಈ ಕುರಿತು ಮಾತನಾಡಿದ್ದ ಪಾಯಲ್, ಅನುರಾಗ್ ವಿರುದ್ಧ ದೂರು ಕೊಟ್ಟು ಒಂದು ವಾರವಾದರೂ ಅವರನ್ನು ಪೊಲೀಸರು ಕರೆಸಿ ವಿಚಾರಣೆ ನಡೆಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು. ಅನುರಾಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಉಪವಾಸ ಸತ್ಯಾಗ್ರಹ ಸಹ ಮಾಡುವುದಾಗಿ ಹೇಳಿದ್ದರು. ಈ ಸಂಬಂಧ, ಅವರು ಮುಂಬೈನಲ್ಲಿ ಇಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರನ್ನು ಭೇಟಿ ಮಾಡಿ, ತಮ್ಮ ಮೇಲಾಗಿರುವ ಅನ್ಯಾಯದ ಬಗ್ಗೆ ಮಾತನಾಡಿದ್ದಾರೆ.
ಇದನ್ನೂ ಓದಿ: ಕರೊನಾ ಎಫೆಕ್ಟ್: ತರಕಾರಿ ಮಾರ್ತಿದ್ದಾರೆ ‘ಬಾಲಿಕಾ ವಧು’ ನಿರ್ದೇಶಕರು
ಈ ಕುರಿತು ಮಾತನಾಡಿರುವ ಕೇಂದ್ರ ಸಚಿವರು, ಪಾಯಲ್ಗೆ ತಮ್ಮ ಸಂಪೂರ್ಣ ಸಹಾಯಹಸ್ತವನ್ನು ಚಾಚಿದ್ದಾರೆ. ಅಷ್ಟೇ ಅಲ್ಲ, ಮುಂಬೈಗೆ ಏಳು ದಿನಗಳ ಗಡುವು ನೀಡಿರುವ ಅವರು, ಏಳು ದಿನಗಳೊಳಗಾಗಿ ಅನುರಾಗ್ ಕಶ್ಯಪ್ ಅವರನ್ನು ಬಂಧಿಸದಿದ್ದರೆ, ಮುಂಬೈನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಹೇಳಿದ್ದಾರೆ.
ಇದುವರೆಗೂ ಅನುರಾಗ್ ಅವರಿಂದ ದೂರವೇ ಉಳಿದಿದ್ದ ಮುಂಬೈ ಪೊಲೀಸರು, ಈಗಲಾದರೂ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಾರಾ ಮತ್ತು ಅನುರಾಗ್ ಅವರನ್ನು ಕರೆಸಿ ವಿಚಾರಣೆ ನಡೆಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಜಗತ್ತಿನ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಯಾರು ಎಂದು ಹೇಳಿದ ಕಂಗನಾ ರಣಾವತ್