ಮತದಾರರ ಪಟ್ಟಿ ಅಕ್ರಮ ಪ್ರಕರಣದ ತನಿಖೆಗೆ ಮುಕ್ತ ಅವಕಾಶ ಕೊಟ್ಟಿದ್ದರಿಂದಲೇ ಹಲವರ ಬಂಧನ: ಸಿಎಂ

ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣದ ತನಿಖೆಗೆ ಪೊಲೀಸರಿಗೆ ಸರ್ಕಾರ ಮುಕ್ತ ಅವಕಾಶ ಕೊಟ್ಟಿದ್ದರಿಂದಲೇ ಹಲವರ ಬಂಧನವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸಮರ್ಥಿಸಿಕೊಂಡರು. ಸಂವಿಧಾನ ದಿನಾಚರಣೆ ನಿಮಿತ್ತ ವಿಧಾನಸೌಧ ಮುಂಭಾಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ನಂತರ ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದರು. ಈ ಅಕ್ರಮಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ತನಿಖೆ ಆರಂಭಿಸಿರುವುದನ್ನು ಸ್ವಾಗತಿಸುತ್ತೇನೆ. ಮತದಾರರ ಪಟ್ಟಿಯಿಂದ ಅನ್ಯಾಯವಾಗಿ ರದ್ದಾದ ಹೆಸರುಗಳ ಸೇರ್ಪಡೆ, ಎರಡೆರಡು ಕಡೆ ಹೆಸರಿದ್ದರೆ ಒಂದು ಕಡೆ ಕೈಬಿಡುವ ಪ್ರಕ್ರಿಯೆಯನ್ನು … Continue reading ಮತದಾರರ ಪಟ್ಟಿ ಅಕ್ರಮ ಪ್ರಕರಣದ ತನಿಖೆಗೆ ಮುಕ್ತ ಅವಕಾಶ ಕೊಟ್ಟಿದ್ದರಿಂದಲೇ ಹಲವರ ಬಂಧನ: ಸಿಎಂ