More

    ದೇಶದಿಂದ ಪರಾರಿಯಾಗಿರುವ ಪ್ರಜ್ವಲ್‌ನ ಬಂಧಿಸಿ

    ರಾಯಚೂರು: ಮಹಿಳೆಯರ ಮೇಲೆ ದೈಹಿಕ ದೌರ್ಜನ್ಯ ಎಸಗಿ ದೇಶದಿಂದ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂದೇಶದಿಂದ ಪರಾರಿಯಾಗಿರುವ ಪ್ರಜ್ವಲ್‌ನ ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯ ಅಂಬೇಡ್ಕರ್ ವೃತ್ತದಲ್ಲಿ ಯುವ ಕಾಂಗ್ರೆಸ್‌ನಿಂದ ಭಾನುವಾರ ಪ್ರತಿಭಟನೆ ನಡೆಸಲಾಯಿತು.
    ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ ಮಾತನಾಡಿ, ಅಶ್ಲೀಲ ವಿಡಿಯೋ ಬಿಡುಗಡೆಯಾದ ನಂತರದಲ್ಲಿ ಪ್ರಜ್ವಲ್ ದೇಶ ಬಿಟ್ಟು ಹೋಗಲು ಬಿಜೆಪಿಯವರು ಅನುವು ಮಾಡಿಕೊಟ್ಟಿದ್ದಾರೆ. ಮಹಿಳೆಯರ ಪರವಾಗಿ ಇರುವುದಾಗಿ ಮಾತನಾಡುವ ಪ್ರಧಾನಿ ವೌನ ವಹಿಸಿದ್ದಾರೆ.
    ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ಬಗ್ಗೆ ಮೋದಿ ಮಾತನಾಡುತ್ತಾರೆ. ಆದರೆ 400ಕ್ಕೂ ಅಕ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿರುವ ಪ್ರಜ್ವಲ್ ಬಗ್ಗೆ ಪ್ರಧಾನಿ ಮಾತನಾಡುವುದಿಲ್ಲ. ವಿಡಿಯೋಗಳನ್ನು ಬಿಜೆಪಿಯವರು ಬಹಿರಂಗಗೊಳಿಸಿ ಡಿ.ಕೆ.ಶಿವಕುಮಾರ ವಿರುದ್ಧ ಆರೋಪ ಮಾಡುತ್ತಾರೆ.
    ಭೇಟಿ ಪಡಾವೋ ಭೇಟಿ ಬಚಾವೋ ಎಂದು ಭಾಷಣ ಮಾಡುವ ಮೋದಿ ದೇಶದ ಭೇಟಿಯರ ರಕ್ಷಣೆ ಮಾಡಲು ಮುಂದಾಗಿಲ್ಲ. ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು, ಕಾಂಗ್ರೆಸ್‌ನಿಂದ ಮಾತ್ರ ಮಹಿಳೆಯರಿಗೆ ರಕ್ಷಣೆ ದೊರೆಯಲಿದೆ ಎಂದು ಹೇಳಿದರು.
    ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ರವಿ ಬೋಸರಾಜು, ಮಂಜುನಾಥ, ಅರುಣ ದೋತರಬಂಡಿ, ಪ್ರವೀಣ ಪ್ರಭುಶೆಟ್ಟರ್, ಶೇಖರ್ ರೆಡ್ಡಿ, ಭೀಮರಾಯ, ಹನುಮಂತು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts