More

    ಸ್ಫೋಟಕ ಬಳಸಿ ಗಣಿಗಾರಿಕೆ ಮಾಡುತ್ತಿದ್ದ ಮೂವರ ಬಂಧನ

    ಕೆ.ಆರ್.ಸಾಗರ: ಇಲ್ಲಿನ ಬನ್ನಂಗಾಡಿ ಗ್ರಾಮದ ಸರ್ವೇ ನಂ. 24ರಲ್ಲಿ ಬರುವ ಕ್ವಾರೆಯಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಗಣಿಗಾರಿಕೆ ಮಾಡುತ್ತಿದ್ದ ಮೂವರನ್ನು ಕೆ.ಆರ್.ಸಾಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

    ಕ್ವಾರೆ ಮಾಲೀಕ ಮಹಾಲಿಂಗು, ಮುರಳಿ, ಜಯರಾಜು ಬಂಧಿತರು. ಇವರಿಗೆ ಸ್ಫೋಟಕಗಳನ್ನು ಸರಬರಾಜು ಮಾಡುತ್ತಿದ್ದ ಪಾಂಡವಪುರದ ಸೈಫ್‌ಉಲ್ಲಾ ಎಂಬಾತ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ.

    ಸ್ಫೋಟಕ ಬಳಸಿ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಿರಿಯ ವಿಜ್ಞಾನಿ ನಾಗಮಧು ಅವರು ನೀಡಿದ ದೂರಿನ ಮೇರೆಗೆ ಕೆ.ಆರ್.ಸಾಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಮಲ್ಲೇಶ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಪಾಂಡವಪುರ ನ್ಯಾಯಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts