More

    ಅಂತರ ಜಿಲ್ಲಾ ಕಳ್ಳಿಯರಿಬ್ಬರ ಬಂಧನ

    ಮುಂಡಗೋಡ: ಹಣ ಹಾಗೂ ಚಿನ್ನದ ಆಭರಣ ಕಳ್ಳತನ ಮಾಡಿದ್ದ ಇಬ್ಬರು ಅಂತರ ಜಿಲ್ಲಾ ಕಳ್ಳಿಯರನ್ನು ಬಂಧಿಸಿದ ಘಟನೆ ಶನಿವಾರ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹನುಮಂತನಗರ ಸರ್ಕಾರಿ ಕನ್ನಡ ಶಾಲೆಯ ಸನಿಹದ ನಿವಾಸಿ ಶಾಂತಿ ವೆಂಕಟರಮಣ ಕಲ್ಲವಡ್ಡರ (31), ಮೀನಾಕ್ಷಿ ಪರಮೇಶ ಕಲ್ಲವಡ್ಡರ (38) ಬಂಧಿತರು.

    2022ರ ಮೇ 16ರಂದು ತಾಲೂಕಿನ ಚಿಗಳ್ಳಿ ಗ್ರಾಮದ ಶ್ರುತಿ ಬಶೆಟ್ಟೆಪ್ಪ ಅರಳಿಕಟ್ಟಿ ಎಂಬುವರು ಎಸ್‌ಬಿಐ ಬ್ಯಾಂಕ್‌ನಿಂದ 49 ಸಾವಿರ ರೂ. ಡ್ರಾ ಮಾಡಿಕೊಂಡು ಬ್ಯಾಗ್‌ನಲ್ಲಿ ಇಟ್ಟುಕೊಂಡು ಕೋರ್ಟ್ ಮುಂಭಾಗದಲ್ಲಿ ಕೆಲ ದಾಖಲೆಗಳನ್ನು ಜೆರಾಕ್ಸ್ ಮಾಡಿಸುವ ವೇಳೆ ಹಣ ಕಳ್ಳತನವಾಗಿತ್ತು. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಇಬ್ಬರು ಕಳ್ಳಿಯರ ವಿಚಾರಣೆ ನಡೆಸಿದಾಗ ಎರಡು ತಿಂಗಳಲ್ಲಿ ಶಿರಸಿ-ನಿಲೇಕಣಿ ಬಸ್ ನಿಲ್ದಾಣದಲ್ಲಿಯೂ ಆಭರಣ ಕಳ್ಳತನ ಮಾಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಳ್ಳಿಯರಿಂದ 100 ಗ್ರಾಂ. ಬಂಗಾರದ ಆಭರಣಗಳು ಹಾಗೂ 20 ಸಾವಿರ ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎನ್. ವಿಷ್ಣುವರ್ಧನ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ. ಜಯಕುಮಾರ, ಜಗದೀಶ ನಾಯ್ಕ, ಶಿರಸಿ ಡಿವೈಎಸ್‌ಪಿ ಗಣೇಶ ಕೆ.ಎಲ್. ಮಾರ್ಗದರ್ಶನದಲ್ಲಿ ಸಿಪಿಐ ಬಿ.ಎಸ್. ಲೋಕಾಪುರ, ಪಿಎಸ್‌ಐ ಪರಶುರಾಮ ಮಿರ್ಜಗಿ, ಹನುಮಂತ ಕುಡಗುಂಟಿ, ಸಿಬ್ಬಂದಿ ಗಂಗಾಧರ ಹೊಂಗಲ, ಗೀತಾ ಕಲಘಟಗಿ, ಗಣಪತಿ ಹೊನ್ನಳ್ಳಿ, ಕೋಟೇಶ್ವರ ನಾಗರವಳ್ಳಿ, ಅಣ್ಣಪ್ಪ ಬುಡಗೇರಿ, ಮಹಾಂತೇಶ ಮುಧೋಳ, ತಿರುಪತಿ, ಜ್ಯೋತಿ ಬನವಾಸಿ, ಪುಷ್ಪಾ, ಶಾಲಿನಿ, ರೇಖಾ ಕಾರ್ಯಾಚರಣೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts