More

    ಪ್ರತಿಮೆ ಭಗ್ನಗೊಳಿಸಿದವರನ್ನು ಬಂಧಿಸಿ

    ಲಕ್ಷ್ಮೇಶ್ವರ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿಯಲ್ಲಿನ ಬಸವೇಶ್ವರರ ಪ್ರತಿಮೆಗೆ ಧಕ್ಕೆ ಮಾಡಿರುವ ಕಿಡಿಗೇಡಿಗಳನ್ನು ಪತ್ತೆ ಮಾಡಿ ಕೂಡಲೆ, ಬಂಧಿಸಿ ಶಿಕ್ಷೆಗೊಳ ಪಡಿಸಬೇಕು ಎಂದು ಕರ್ನಾಟಕ ಭ್ರಷ್ಟಾಚಾರ ನಿಮೂಲನಾ ವೇದಿಕೆ ಜಿಲ್ಲಾ ಮತ್ತು ತಾಲೂಕು ಘಟಕದ ಪದಾಧಿಕಾರಿಗಳು ಪಟ್ಟಣದಲ್ಲಿ ಉಪತಹಸೀಲ್ದಾರ್ ಮಂಜುನಾಥ ದಾಸಪ್ಪನವರಗೆ ಗುರುವಾರ ಮನವಿ ಸಲ್ಲಿಸಿದರು.

    ಮನವಿಯಲ್ಲಿ ಇಡೀ ಮಾನವ ಕುಲಕ್ಕೆ ಶಾಂತಿ, ಪ್ರೀತಿ, ಸಮಾನತೆ ಸಂದೇಶ ಸಾರಿದ ವಿಶ್ವಗುರು ಬಸವಣ್ಣನವರ ಮೂರ್ತಿ ಭಗ್ನಗೊಳಿಸಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತದ್ದಾಗಿದೆ. ಮಾನವೀಯತೆಯ ಸಂದೇಶವನ್ನು ಇಡೀ ಜಗತ್ತಿಗೆ ನೀಡಿದ ಬಸವೇಶ್ವರರು ಸಮಾಜದ ಉನ್ನತಿಗೆ ಶ್ರಮಿಸಿದ ಕ್ರಾಂತಿ ಪುರುಷರಾಗಿದ್ದಾರೆ. ಇಂತಹ ಮಹಾನ್ ಶರಣರ ಪ್ರತಿಮೆ ಭಗ್ನಗೊಳಿಸಿದವರನ್ನು ಪತ್ತೆ ಮಾಡಿ ಕಠಿಣ ಶಿಕ್ಷೆ ವಿಧಿಸಬೇಕು. ಅಲ್ಲದೆ, ರಾಜ್ಯದಲ್ಲಿನ ಮಹಾತ್ಮರ ಪ್ರತಿಮೆಗಳ ಬಳಿ ಸಿಸಿ ಕ್ಯಾಮರಾ ಅಳವಡಿಸಬೇಕು ಎಂದು ಆಗ್ರಹಿಸಲಾಗಿದೆ. ರಾಜ್ಯ ಗೃಹ ಸಚಿವರಿಗೆ ಬರೆದ ಮನವಿ ಪತ್ರವನ್ನು ಉಪ ತಹಸೀಲ್ದಾರ್ ಮಂಜುನಾಥ ದಾಸಪ್ಪ ನವರ ಸ್ವೀಕರಿಸಿದರು. ಜಿಲ್ಲಾಧ್ಯಕ್ಷ ಪ್ರತಾಪ ಅಂಕಲಿ, ರಾಕೇಶ ಭೀಮಣ್ಣವರ, ಶಂಕರ ಮೆಕ್ಕಿ, ರವೀಶ ಭಾವಿಕಟ್ಟಿ, ಅಮರೇಶ ಗಾಂಜಿ, ಫಕೀರೇಶ ಮ್ಯಾಟಣ್ಣವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts