More

    ದಾಳಿಕೋರರ ಬಂಧನಕ್ಕೆ ಮೂರು ತಂಡ

    ಸಿಂಧನೂರು: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶೀಲನೆಗೆ ತೆರಳಿದ್ದ ಬಳಗಾನೂರು ಪೊಲೀಸ್ ಪೇದೆಗಳ ಮೇಲೆ ಮಸ್ಕಿಯಲ್ಲಿ ನಡೆದ ಹಲ್ಲೆ ಪ್ರಕರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಹಲ್ಲೆಕೋರರ ಬಂಧನಕ್ಕೆ ಮೂರು ತಂಡಗಳನ್ನು ರಚಿಸಲಾಗಿದ್ದು, ಶೀಘ್ರ ಬಂಧಿಸಲಾಗುವುದು ಎಂದು ಎಸ್ಪಿ ಬಿ.ನಿಖಿಲ್ ತಿಳಿಸಿದರು.

    ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಳಗಾನೂರು ಠಾಣೆಯ ಪೇದೆಗಳಾದ ಮಂಜುನಾಥ ಹಾಗೂ ಗೋಪಾಲ ಅವರ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದರು. ಪೊಲೀಸ್ ಪೇದೆಗಳ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಹಲ್ಲೆಕೋರರ ಬಗ್ಗೆ ಮಾಹಿತಿಯೂ ಲಭ್ಯವಾಗಿದೆ ಎಂದರು.

    ನಗರದ ಇಂದಿರಾ ಪ್ರಿಯದರ್ಶಿನಿ ಶಾಲೆ ಹತ್ತಿರ ಸೋಮವಾರ ಸುಮಾರು 7 ವರ್ಷ ವಯಸ್ಸಿನ ಬಾಲಕಿಯ ಅನಾಮಧೇಯ ಶವ ಪತ್ತೆಯಾದ ಸ್ಥಳಕ್ಕೂ ಎಸ್‌ಪಿ ಭೇಟಿ ನೀಡಿದರು. ಮೃತ ಬಾಲಕಿಯ ಗುರುತು ಪತ್ತೆಗೆ ಎಲ್ಲ ಪ್ರಯತ್ನ ನಡೆಸಲಾಗುವುದು. ಆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಸಿಂಧನೂರು ನಗರದ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಿದ್ದು, ಶೀಘ್ರ ಕಳ್ಳರನ್ನು ಬಂಧಿಸಲಾಗುವುದು ಎಂದು ಎಸ್ಪಿ ನಿಖಿಲ್ ತಿಳಿಸಿದರು. ಡಿವೈಎಸ್ಪಿ ಬಿ.ಎಸ್.ತಳವಾರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts