ಮಂಗಳೂರು: ಚೆಕ್ಬೌನ್ಸ್ ಕೇಸ್ನಲ್ಲಿ ಹಲವು ಬಾರಿ ಸಮನ್ಸ್ ಪಡೆಯದೆ ತಪ್ಪಿಸಿಕೊಂಡಿದ್ದ ಕನ್ನಡ ಚಿತ್ರರಂಗ ಪೋಷಕ ನಟಿ, ಕಿರುತೆರೆ ನಿರ್ದೇಶಕಿ ಪದ್ಮಜಾ ರಾವ್, ನಿನ್ನೆ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗುತ್ತಿದ್ದಂತೆ ಇಂದು ಬೆಳಗ್ಗೆ ಕೋರ್ಟ್ಗೆ ಹಾಜರ್ ಆದರು.
ನಟ, ನಿರ್ದೇಶಕ ವಿರೇಂದ್ರ ಶೆಟ್ಟಿ ಒಡೆತನದ ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಗೆ ನೀಡಿದ್ದ 40 ಲಕ್ಷ ರೂ. ಮೌಲ್ಯದ ಚೆಕ್ ಬೌನ್ಸ್ ಪ್ರಕರಣದಲ್ಲಿ ಪದ್ಮಜಾ ರಾವ್ ವಿರುದ್ಧ ಮಂಗಳೂರಿನ ಜೆಎಂಎಫ್ಸಿ ಐದನೇ ನ್ಯಾಯಾಲಯ ಗುರುವಾರ ವಾರಂಟ್ ಜಾರಿ ಮಾಡಿತ್ತು. ಪದ್ಮಜಾ ರಾವ್ ಅವರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ವಾರಂಟ್ ಆದೇಶದ ಪ್ರತಿಯನ್ನು ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣೆಗೆ ರವಾನಿಸಲಾಗಿತ್ತು. ಇದನ್ನೂ ಓದಿರಿ Video| ಬಿಜೆಪಿ ಮುಖಂಡನ ಬರ್ತ್ ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ
ಮರುದಿನವೇ ಮಂಗಳೂರಿನ 5ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರ್ ಆದ ನಟಿ ಪದ್ಮಜಾ ರಾವ್, ನ್ಯಾಯಾಲಯಕ್ಕೆ ಬಾಂಡ್ ನೀಡಿ ಜಾಮೀನು ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಟಿ, ನನಗೆ ನಮ್ಮ ಕಾನೂನು ಮತ್ತು ನ್ಯಾಯಾಲಯದ ಮೇಲೆ ಸಂಪೂರ್ಣ ಭರವಸೆ ಇದೆ. ನನ್ನ ಮೇಲೂ ನನಗೆ ಪೂರ್ಣ ಭರವಸೆ ಇದೆ. ಈ ಪ್ರಕರಣದಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ. ನಿವೆಲ್ಲಾ ಕಾದು ನೋಡಬೇಕು ಎಂದರು.
ತಹಸೀಲ್ದಾರ್ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!