More

    ಬಂಧನ ವಾರಂಟ್​ ಜಾರಿಯಾಗುತ್ತಿದ್ದಂತೆ ಕೋರ್ಟ್​ಗೆ ದೌಡಾಯಿಸಿದ ನಟಿ ಪದ್ಮಜಾ ರಾವ್​

    ಮಂಗಳೂರು: ಚೆಕ್​ಬೌನ್ಸ್​ ಕೇಸ್​ನಲ್ಲಿ ಹಲವು ಬಾರಿ ಸಮನ್ಸ್​ ಪಡೆಯದೆ ತಪ್ಪಿಸಿಕೊಂಡಿದ್ದ ಕನ್ನಡ ಚಿತ್ರರಂಗ ಪೋಷಕ ನಟಿ, ಕಿರುತೆರೆ ನಿರ್ದೇಶಕಿ ಪದ್ಮಜಾ ರಾವ್‌, ನಿನ್ನೆ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗುತ್ತಿದ್ದಂತೆ ಇಂದು ಬೆಳಗ್ಗೆ ಕೋರ್ಟ್​ಗೆ ಹಾಜರ್​ ಆದರು.

    ನಟ, ನಿರ್ದೇಶಕ ವಿರೇಂದ್ರ ಶೆಟ್ಟಿ ಒಡೆತನದ ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಗೆ ನೀಡಿದ್ದ 40 ಲಕ್ಷ ರೂ. ಮೌಲ್ಯದ ಚೆಕ್​ ಬೌನ್ಸ್‌ ಪ್ರಕರಣದಲ್ಲಿ ಪದ್ಮಜಾ ರಾವ್ ವಿರುದ್ಧ ಮಂಗಳೂರಿನ ಜೆಎಂಎಫ್‌ಸಿ ಐದನೇ ನ್ಯಾಯಾಲಯ ಗುರುವಾರ ವಾರಂಟ್‌ ಜಾರಿ ಮಾಡಿತ್ತು. ಪದ್ಮಜಾ ರಾವ್ ಅವರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ವಾರಂಟ್​ ಆದೇಶದ ಪ್ರತಿಯನ್ನು ಬೆಂಗಳೂರಿನ ತಲಘಟ್ಟಪುರ ಪೊಲೀಸ್‌ ಠಾಣೆಗೆ ರವಾನಿಸಲಾಗಿತ್ತು. ಇದನ್ನೂ ಓದಿರಿ Video| ಬಿಜೆಪಿ ಮುಖಂಡನ ಬರ್ತ್ ​ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ

    ಮರುದಿನವೇ ಮಂಗಳೂರಿನ 5ನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಹಾಜರ್​ ಆದ ನಟಿ ಪದ್ಮಜಾ ರಾವ್​, ನ್ಯಾಯಾಲಯಕ್ಕೆ ಬಾಂಡ್ ನೀಡಿ ಜಾಮೀನು ಪಡೆದರು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಟಿ, ನನಗೆ ನಮ್ಮ ಕಾನೂನು ಮತ್ತು ನ್ಯಾಯಾಲಯದ ಮೇಲೆ ಸಂಪೂರ್ಣ ಭರವಸೆ ಇದೆ. ನನ್ನ ಮೇಲೂ ನನಗೆ ಪೂರ್ಣ ಭರವಸೆ ಇದೆ. ಈ ಪ್ರಕರಣದಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ. ನಿವೆಲ್ಲಾ ಕಾದು ನೋಡಬೇಕು ಎಂದರು.

    ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

    Video| ಬಿಜೆಪಿ ಮುಖಂಡನ ಬರ್ತ್ ​ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts