ವಿಜಯಪುರ: ಒಂಟಿ ಮಹಿಳೆಯರನ್ನ ಟಾರ್ಗೆಟ್ ಮಾಡಿ ಅತ್ಯಾಚಾರ ಎಸಗಿ ಕೊಲೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹಣಮಂತ ಭಜಂತ್ರಿ ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಯಡ್ರಾಮಿ ಪೊಲೀಸರು ಬಂಧಿಸಿದ್ದಾರೆ. ಈತ ಹರನಾಳ ಹಾಗೂ ಕುಕನೂರು ಗ್ರಾಮದಲ್ಲಿ ಇಬ್ಬರು ಮಹಿಳೆಯರನ್ನು ಹತ್ಯೆಗೈದಿದ್ದನು.
ಇದನ್ನೂ ಓದಿ: ಮದುವೆ ನಿರಾಕರಿಸಿದ್ದಕ್ಕೆ ಮಹಿಳೆಯ ಕೂದಲು ಕತ್ತರಿಸಿ ಮೆರವಣಿಗೆ
ಮಾರ್ಚ್ ಹಾಗೂ ಮೇ ತಿಂಗಳಲ್ಲಿ ಇಬ್ಬರು ಮಹಿಳೆಯರನ್ನು ಹತ್ಯೆ ಗೈದಿದ್ದ ಹಣಮಂತ ಭಜಂತ್ರಿ. ಕೊಲೆಗೈದು ಶವವನ್ನು ಜಮೀನಿನಲ್ಲಿ ಹೂತಿಡುತ್ತಿದ್ದನು. ಈ ಕುರಿತಾಗಿ ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಶಹಾಪುರದಲ್ಲಿ ಆರೋಪಿ ಹಣಮಂತ ಭಜಂತ್ರಿ ಬಂಧಿಸಿದ್ದಾರೆ.
ವರಿಷ್ಠರ ಮಾತಿಗೆ ಬೆಲೆ ಕೊಟ್ಟು ಚಿನ್ನದಂತಹ ಕ್ಷೇತ್ರ ಬಿಟ್ಟು ಹೋದೆ: ವಿ.ಸೋಮಣ್ಣ