ಹಾಸನ: ಬಿಜೆಪಿಯಿಂದ ಟಿಕೆಟ್ ನಿರೀಕ್ಷೆಯಲ್ಲಿದ್ದ ಬಿ.ಎಸ್. ಯಡಿಯೂರಪ್ಪ ಅವರ ಪರಮಾಪ್ತ ಎನ್.ಆರ್. ಸಂತೋಷ್ಗೆ ನಿರಾಶೆಯಾಗಿದ್ದು, ಜೆಡಿಎಸ್ನತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಅದಕ್ಕೆ ಪೂರಕವಾಗಿ ಸಂತೋಷ್ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ.
ಸಂತೋಷ್ ಅವರು ಅರಸೀಕೆರೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಟಿಕೆಟ್ ನೀಡದೇ ಇರುವುದರಿಂದ ಆಕ್ರೋಶಗೊಂಡಿರುವ ಎನ್.ಆರ್. ಸಂತೋಷ್, ಜೆಡಿಎಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ. ಎಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ: ಕಾಡಾನೆ ದಾಳಿಯಿಂದ ಬೈಕ್ ಸವಾರರು ಜಸ್ಟ್ ಮಿಸ್: ಲಾರಿ ಚಾಲಕನ ಸಮಯ ಪ್ರಜ್ಞೆಗೆ ಸಲಾಂ
ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಶಿವಲಿಂಗೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದೀಗ ಅರಸೀಕೆರೆ ಕ್ಷೇತ್ರದಲ್ಲಿ ಹೊಸ ಜೆಡಿಎಸ್ ಅಭ್ಯರ್ಥಿಯ ಅವಶ್ಯಕತೆ ಇದೆ. ಹೀಗಾಗಿ ಎನ್.ಆರ್. ಸಂತೋಷ್ ಅವರನ್ನು ಜೆಡಿಎಸ್ ಪರಿಗಣಿಸುತ್ತದೆಯೇ? ಎಂಬುದನ್ನು ಕಾದು ನೋಡಬೇಕಿದೆ.
ಈಗಾಗಲೇ ಬಿಜೆಪಿ ಪಾಳಯದಲ್ಲಿ ಬಂಡಾಯದ ಬಿಸಿ ಜೋರಾಗಿದೆ. ಟಿಕೆಟ್ ಮಿಸ್ ಆಗದ್ದಕ್ಕೆ ಅನೇಕ ನಾಯಕರು ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿ ಬೇರೆ ಪಕ್ಷಗಳತ್ತ ಮುಖ ಮಾಡಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ನಿನ್ನೆಯಷ್ಟೇ ಜೆಡಿಎಸ್ ಸೇರಿದ್ದಾರೆ. ಅಲ್ಲದೆ, ಬಿಜೆಪಿ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಹೀಗೆ ಸಾಕಷ್ಟು ಮಂದಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ. (ದಿಗ್ವಿಜಯ ನ್ಯೂಸ್)
ಎರಡು ಬಾರಿ ಹೃದಯಾಘಾತದಿಂದ ಪಾರಾಗಿದ್ದ ಕಾಂಗ್ರೆಸ್ನ ಮಾಜಿ ಶಾಸಕ 3ನೇ ಬಾರಿ ವಿಧಿವಶ