More

    ಬಿಜೆಪಿಯಿಂದ ಟಿಕೆಟ್​ ಮಿಸ್​: ಎಚ್​.ಡಿ. ದೇವೇಗೌಡರನ್ನು ಭೇಟಿ ಮಾಡಿದ ಬಿಎಸ್​ವೈ ಆಪ್ತ ಸಂತೋಷ್​

    ಹಾಸನ: ಬಿಜೆಪಿಯಿಂದ ಟಿಕೆಟ್​ ನಿರೀಕ್ಷೆಯಲ್ಲಿದ್ದ ಬಿ.ಎಸ್​. ಯಡಿಯೂರಪ್ಪ ಅವರ ಪರಮಾಪ್ತ ಎನ್​.ಆರ್​. ಸಂತೋಷ್​ಗೆ ನಿರಾಶೆಯಾಗಿದ್ದು, ಜೆಡಿಎಸ್​ನತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಅದಕ್ಕೆ ಪೂರಕವಾಗಿ ಸಂತೋಷ್​ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ.

    ಸಂತೋಷ್​ ಅವರು ಅರಸೀಕೆರೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಟಿಕೆಟ್​ ನೀಡದೇ ಇರುವುದರಿಂದ ಆಕ್ರೋಶಗೊಂಡಿರುವ ಎನ್​.ಆರ್​. ಸಂತೋಷ್​, ಜೆಡಿಎಸ್​ ಸೇರ್ಪಡೆಯಾಗುವ ಸಾಧ್ಯತೆ ಇದೆ. ಎಚ್​.ಡಿ. ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

    ಇದನ್ನೂ ಓದಿ: ಕಾಡಾನೆ ದಾಳಿಯಿಂದ ಬೈಕ್​ ಸವಾರರು ಜಸ್ಟ್​ ಮಿಸ್​: ಲಾರಿ ಚಾಲಕನ ಸಮಯ ಪ್ರಜ್ಞೆಗೆ ಸಲಾಂ

    ಅರಸೀಕೆರೆ ಕ್ಷೇತ್ರದ ಜೆಡಿಎಸ್​ ಶಾಸಕರಾಗಿದ್ದ ಶಿವಲಿಂಗೇಗೌಡ ಜೆಡಿಎಸ್​ ತೊರೆದು ಕಾಂಗ್ರೆಸ್​​ ಸೇರ್ಪಡೆಯಾಗಿದ್ದಾರೆ. ಇದೀಗ ಅರಸೀಕೆರೆ ಕ್ಷೇತ್ರದಲ್ಲಿ ಹೊಸ ಜೆಡಿಎಸ್​ ಅಭ್ಯರ್ಥಿಯ ಅವಶ್ಯಕತೆ ಇದೆ. ಹೀಗಾಗಿ ಎನ್​.ಆರ್​. ಸಂತೋಷ್​ ಅವರನ್ನು ಜೆಡಿಎಸ್​ ಪರಿಗಣಿಸುತ್ತದೆಯೇ? ಎಂಬುದನ್ನು ಕಾದು ನೋಡಬೇಕಿದೆ.

    ಈಗಾಗಲೇ ಬಿಜೆಪಿ ಪಾಳಯದಲ್ಲಿ ಬಂಡಾಯದ ಬಿಸಿ ಜೋರಾಗಿದೆ. ಟಿಕೆಟ್​ ಮಿಸ್​ ಆಗದ್ದಕ್ಕೆ ಅನೇಕ ನಾಯಕರು ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿ ಬೇರೆ ಪಕ್ಷಗಳತ್ತ ಮುಖ ಮಾಡಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ನಿನ್ನೆಯಷ್ಟೇ ಜೆಡಿಎಸ್​ ಸೇರಿದ್ದಾರೆ. ಅಲ್ಲದೆ, ಬಿಜೆಪಿ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಕಾಂಗ್ರೆಸ್​ ಸೇರ್ಪಡೆಗೊಂಡಿದ್ದಾರೆ. ಹೀಗೆ ಸಾಕಷ್ಟು ಮಂದಿ ಜೆಡಿಎಸ್​ ಮತ್ತು ಕಾಂಗ್ರೆಸ್​ ಕಡೆ ಮುಖ ಮಾಡಿದ್ದಾರೆ. (ದಿಗ್ವಿಜಯ ನ್ಯೂಸ್​​)

    ಎರಡು ಬಾರಿ ಹೃದಯಾಘಾತದಿಂದ ಪಾರಾಗಿದ್ದ ಕಾಂಗ್ರೆಸ್​ನ ಮಾಜಿ ಶಾಸಕ 3ನೇ ಬಾರಿ ವಿಧಿವಶ

    ರಿಷಿಕಾ ಈಗ ‘ಓಕೆ ಮಗಾ’!

    ಫ್ಯಾನ್ಸಿ ನಂಬರ್ 1111​ಗಾಗಿ 5 ಲಕ್ಷ ರೂ. ವ್ಯಯಿಸಿದ ನಟ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts