ನವದೆಹಲಿ: ಈ ಬಾರಿ “ಚುನಾವಣೆ ಅಭಿವೃದ್ಧಿ ಕಾರ್ಯದ ಮೇಲೆ ನಡೆಯಲಿದೆ” ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಟ್ವೀಟ್ ಮಾಡಿದ್ದಾರೆ.
ಚುನಾವಣೆಯಲ್ಲಿ ಈ ಬಾರಿಯು ಆಪ್ ಪಕ್ಷಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಎದುರಾಳಿಯಾಗಿದೆ ಎಂದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾಧಿಕಾರಿ ಸುನಿಲ್ ಆರೋರಾ, ಚುನಾವಣೆಯನ್ನು ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಗದಿಗೊಳಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಕಾನೂನು ಸುರಕ್ಷತೆ ಬಗ್ಗೆ ನಮಗೆ ಬರವಣಿಗೆಯಲ್ಲಿ ಒಪ್ಪಿಗೆ ಸೂಚಿಸಿದ್ದಾರೆ ಎಂದಿದ್ದರು.
ಅಲ್ಲದೆ ಚುನಾವಣೆ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಯಾಗಿದೆ ಎಂದು ಆರೋರಾ ಸ್ಪಷ್ಟಪಡಿಸಿದ್ದರು.
ಈ ನಡುವೆ ಬಿಜೆಪಿ “ಚಾರ್ಜ್ಶೀಟ್” ದಾಖಲೆ ಪತ್ರವನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಆಪ್ ಪಕ್ಷದ ವಿರುದ್ಧ, ದೆಹಲಿ ಮಾಲಿನ್ಯದ ವಿರುದ್ಧ, ವಾಹನ ಸಾಗಣೆ ವಿರುದ್ಧ ಕಿಡಿ ಕಾರಿದೆ.
ಈ “ಆರೋಪಪತ್ರ”ಕ್ಕೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ಇದರಲ್ಲಿನ ಆರೋಪಗಳನ್ನು ಪರಿಶೀಲಿಸಲಾಗುವುದು ಮತ್ತು ಬಿಜೆಪಿ ನೀಡುವ ಸಲಹೆಗಳನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ. (ಏಜೆನ್ಸೀಸ್)
ये चुनाव काम पर होगा
— Arvind Kejriwal (@ArvindKejriwal) January 6, 2020