ನವದೆಹಲಿ: ಅಬಕಾರಿ ನೀತಿ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.
ಅಬಕಾರಿ ನೀತಿ ಜಾರಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ಕೇಜ್ರಿವಾಲ್ ಅವರಿಗೆ ಆರು ಬಾರಿ ಇಡಿ ಅವರಿಗೆ ಸಮನ್ಸ್ ನೀಡಿತ್ತು ಒಂದಕ್ಕೂ ಉತ್ತರ ನೀಡಿಲ್ಲ. ಈ ಕಾರಣಕ್ಕೆ ಕೋರ್ಟ್ ಅವರಿಗೆ ವಿಚಾರಣೆ ಬರುವಂತೆ ಆದೇಶವನ್ನು ನೀಡಿತ್ತು.
ಇದನ್ನೂ ಓದಿ: ಕೆರೆಗೆ ಸೇರುತ್ತಿರುವ ತ್ಯಾಜ್ಯ ನೀರು; ಸಾವಿರಾರು ಮೀನುಗಳ ಮಾರಣ ಹೋಮ
ಕೋರ್ಟ್ ಆದೇಶದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. ದೆಹಲಿಯಲ್ಲಿ ವಿಧಾನಸಭೆ ಕಲಾಪ ನಡೆಯುತ್ತಿದ್ದು, ಇಂದು ವಿಶ್ವಾಸ ಮತಯಾಚನೆ ನಡೆಯಲಿದೆ. ಆ ಕಾರಣದಿಂದ ದೈಹಿಕವಾಗಿ ಸದನದಲ್ಲಿ ಹಾಜರಾಗಬೇಕು ಅದಕ್ಕಾಗಿ ಕೋರ್ಟ್ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಹಾಜರಾಗುತ್ತಿದ್ಧೇನೆ. ಮುಂದಿನ ಬಾರಿ ವಿಚಾರಣೆಗೆ ದೈಹಿಕವಾಗಿ ಹಾಜರಾಗುವುದಾಗಿ ಕೇಜ್ರಿವಾಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರು ಇಂದು ದೆಹಲಿ ವಿಧಾನಸಭೆಯ ಮುಂದೆ ತನ್ನ ಸರ್ಕಾರದ ಬಲವನ್ನು ಹಾಗೂ ವಿಶ್ವಾಸವನ್ನು ಮಂಡಿಸಲಿದ್ದಾರೆ. ವಿಶ್ವಾಸಮತ ಯಾಚನೆಗೆ ನೆನ್ನೆ (ಫೆ.16) ನಿರ್ಣಯವನ್ನು ಮಂಡಿಸಿದ್ದಾರೆ. ದೆಹಲಿಯಲ್ಲಿ ವಿಧಾಸಭೆ ಕಲಾಪ ನಡೆಯುತ್ತಿದ್ದು, ಬಜೆಟ್ ಮಂಡನೆಗೂ ಮುನ್ನ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ.