ನವದೆಹಲಿ: ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸ್ವೀಟ್ಸ್, ಮಾವಿನಹಣ್ಣು ತಿನ್ನುವ ಮೂಲಕ ದೇಹದಲ್ಲಿನ ಸಕ್ಕರೆ ಅಂಶವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂದು ಇಡಿ ದೆಹಲಿ ಕೋರ್ಟ್ಗೆ ದೂರು ಸಲ್ಲಿಸಿತ್ತು. ಇದರ ಬೆನ್ನಲ್ಲೇ ತನಗೆ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ ಎಂದು ಜೈಲಿನ ಅಧಿಕಾರಿಗಳಿಗೆ ಸಿಎಂ ಪತ್ರ ಬರೆದಿರುವುದಾಗಿ ತಿಳಿಸಿದ್ದರು. ಸದ್ಯ ಇಡಿ ಕಸ್ಟಡಿಯಲ್ಲಿರುವ ಕೇಜ್ರಿವಾಲ್ ಆರೋಗ್ಯ ಸಂಪೂರ್ಣ ಸುಧಾರಣೆ ಕಂಡಿದೆ ಎಂದು ಏಮ್ಸ್ ಮೆಡಿಕಲ್ ಬೋರ್ಡ್ ತಿಳಿಸಿದೆ.
ಇದನ್ನೂ ಓದಿ: ಭೂ ಹಗರಣ ಪ್ರಕರಣ: ಹೇಮಂತ್ ಸೊರೆನ್ ಮಧ್ಯಂತರ ಜಾಮೀನು ನಿರಾಕರಿಸಿದ ಕೋರ್ಟ್!
ತಿಹಾರ್ ಜೈಲಿಗೆ ಬಂದಾಗಿನಿಂದಲೂ ದೆಹಲಿ ಸಿಎಂ ಆರೋಗ್ಯದ ಬಗ್ಗೆ ಅನೇಕರಿಗೆ ಗೊಂದಲ ಮೂಡಿತ್ತು. ಕೇಜ್ರಿವಾಲ್ ಆರೋಗ್ಯ ನಿಜಕ್ಕೂ ಸರಿಯಿಲ್ಲವೇ? ಅಥವಾ ಇಡಿ ಹೇಳಿದಂತೆ ಆರೋಗ್ಯ ವಿಚಾರವನ್ನು ಮುಂದಿಟ್ಟು ಪ್ರಕರಣದಲ್ಲಿ ಜಾಮೀನು ಪಡೆಯುವ ಸಲುವಾಗಿ ನೀಡುತ್ತಿರುವ ಕಾರಣವೇ ಎಂಬುದು ಸ್ಪಷ್ಟವಾಗಿರಲಿಲ್ಲ. ಆದರೆ, ಈ ಕುರಿತಂತೆ ಇದೀಗ ಏಮ್ಸ್ ಮೆಡಿಕಲ್ ಬೋರ್ಡ್ ಹೊಸ ಮಾಹಿತಿ ಹಂಚಿಕೊಳ್ಳುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದೆ.
ದೆಹಲಿ ಕೋರ್ಟ್ ನೀಡಿದ ನಿರ್ದೇಶನದಂತೆ ಅರವಿಂದ್ ಕೇಜ್ರಿವಾಲ್ ಆರೋಗ್ಯ ಪರಿಶೀಲಿಸಿದ ಮೆಡಿಕಲ್ ಬೋರ್ಡ್ನ ಐವರು ಸದಸ್ಯರು, ಕೇಜ್ರಿವಾಲ್ರ ಆರೋಗ್ಯ ಸಂಪೂರ್ಣವಾಗಿ ಸುಧಾರಣೆ ಕಂಡಿದೆ. ಕೊಡಲಾದ ಎರಡು ಯೂನಿಟ್ನ ಇನ್ಸುಲಿನ್ ಡೋಸ್ಗಳನ್ನು ತಪ್ಪದೇ ಮುಂದುವರಿಸುವುದು ಒಳಿತು ಎಂದು ತಿಳಿಸಿದ್ದಾರೆ,(ಏಜೆನ್ಸೀಸ್).
ತಾಳಿ ಕಟ್ಟುವ ವೇಳೆ ಕಣ್ಣೀರಿಟ್ಟ ಆರತಿ ಸಿಂಗ್! ಕೃಷ್ಣ-ಕಾಶ್ಮೀರ ದಂಪತಿಗೆ ಹಿಗ್ಗಾಮುಗ್ಗಾ ಜಾಡಿಸಿದ ನೆಟ್ಟಿಗರು
ಯುವತಿಯರಿಗೆ ಅಸಭ್ಯ ಮೆಸೇಜ್ ಕಳಿಸುತ್ತಿದ್ದ ಮೊಬೈಲ್ ಅಂಗಡಿಯ ಯುವಕನಿಗೆ ಬಿತ್ತು ಹಿಗ್ಗಾಮುಗ್ಗಾ ಗೂಸ!