More

    ಜೈಲಿನಿಂದ ಹೊರಬಂದ ಬಳಿಕ ಸತ್ಯೇಂದರ್​ ಜೈನ್​ರನ್ನು ಭೇಟಿ ಮಾಡಿದ ಕೇಜ್ರಿವಾಲ್​

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ಸೆರೆವಾಸ ಅನುಭವಿಸುತ್ತಿದ್ದ ದೆಹಲಿ ಸರ್ಕಾರದ ಮಾಜಿ ಸಚಿವ ಸತ್ಯೇಂದರ್​ ಜೈನ್ರನ್ನು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

    ಸುಮಾರು ಒಂದು ವರ್ಷದಿಂದ ತಿಹಾರ್​ ಜೈಲಿನಲ್ಲಿರುವ ಸತ್ಯೇಂದರ್​ ಜೈನ್​ ಇತ್ತೀಚಿಗೆ ಸ್ನಾನ ಮಾಡುವ ವೇಳೆ ಜಾರಿ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಈ ಕುರಿತು ಟ್ವೀಟ್​ ಮಾಡಿರುವ ಅರವಿಂದ್​ ಕೇಜ್ರಿವಾಲ್​ ಧೈರ್ಯಶಾಲಿಯನ್ನು ಭೇಟಿ ಮಾಡಿದೆ ಎಂದು ಸತ್ಯೇಂದರ್​ ಜೈನ್​ ಜೊತೆ ಮಾತುಕತೆ ನಡೆಸುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

    ಇದನ್ನೂ ಓದಿ: ಅನ್ಯಕೋಮಿನ ಯುವತಿ ಜೊತೆ ಚಾಟ್ಸ್​ ತಿಂದಿದ್ದಕ್ಕೆ ಹಲ್ಲೆ; ಆರೋಪಿಗಳು ಅರೆಸ್ಟ್​

    ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಲೋಕನಾಯಕ ಆಸ್ಪತ್ರೆಗೆ ದಾಖಲಾಗಿರುವ ಸತ್ಯೇಂದರ್​ ಜೈನ್​ ಅವರಿಗೆ ಸುಪ್ರೀಂ ಕೋರ್ಟ್​ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ.

    ಎಎಪಿ ನಾಯಕನಿಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್​ ಮಾಧ್ಯಮಗಳ ಜೊತೆ ಮಾತನಾಡದಂತೆ ಮತ್ತು ದೆಹಲಿಯನ್ನು ತೊರೆಯಬಾರದು ಎಂದು ತಾಕೀತು ಮಾಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts