ಪಂಜಾಬ್​ ಸಿಎಂ ಆಗಿ ಕೇಜ್ರಿವಾಲ್ ಪದಗ್ರಹಣ? ನಿಜವಾಗುತ್ತ Congress ನಾಯಕರು ನುಡಿದ ಭವಿಷ್ಯ

Kejri Mann

ನವದೆಹಲಿ: 70 ಸದಸ್ಯಬಲದ ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ 25 ವರ್ಷಗಳ ಅಧಿಕಾರಕ್ಕೇರಿದ್ದು, ಆಡಳಿತರೂಢ ಎಎಪಿಗೆ ಭಾರೀ ಮುಖಭಂಗವಾಗಿದೆ. ಸೋಲಿಗೆ ಕಾರಣವಾದ ಅಂಶಗಳನ್ನು ಎಎಪಿ ನಾಯಕರು ಹುಡುಕಾಡುತ್ತಿರುವ ನಡುವೆಯೇ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್​ ಪಂಜಾಬ್​ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ವಿಚಾರ ಕೇಳಿ ಬಂದಿದ್ದು, ಕಾಂಗ್ರೆಸ್​ (Congress) ನಾಯಕರು ನೀಡಿರುವ ಹೇಳಿಕೆ ರಾಷ್ಟ್ರ ರಾಜಕಾರಣದಲ್ಲಿ ಹೊಸ ಚರ್ಚೆಯನ್ನೇ ಹುಟ್ಟುಹಾಕಿದೆ.

ರಾಜ್ಯ ಎಎಪಿ​ ಘಟಕದ ಅಧ್ಯಕ್ಷ ಅಮನ್​ ಅರೋರಾ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದ ವಿಪಕ್ಷ ನಾಯಕ ಪರತಾಪ್ ಸಿಂಗ್ ಬಾಜ್ವಾ, ಹಿಂದೂ ಕೂಡ ಪಂಜಾಬ್​ನ ಮುಖ್ಯಮಂತ್ರಿಯಾಗಬಹುದಾಗಿದೆ. ಸಿಎಂ ಕುರ್ಚಿಯಲ್ಲಿ ಕೂರುವಂತಹ ವ್ಯಕ್ತಿ ಹಿಂದೂ ಅಥವಾ ಸಿಖ್‌ನ ಪ್ರಿಸ್ಮ್‌ನಲ್ಲಿ ನೋಡಬಾರದು ಆತ ಸಮರ್ಥವಾಗಿರಬೇಕು ಎಂದು ಅಮನ್​ ಅರೋರಾ ಹೇಳಿಕೆಯನ್ನು ನೀಡಿದ್ದರು. 

ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುವ ಎರಡು ದಿನ ಮುಂಚೆ ಈ ಹೇಳಿಕೆ ಹೊರಬಿದ್ದಿದ್ದು, ಎಎಪಿ ನಾಯಕತ್ವವು ಕೇಜ್ರಿವಾಲ್​ಗೆ ಹೇಗೆ ಪಂಜಾಬ್ ಸಿಎಂ ಆಗಲು ದಾರಿ ಮಾಡಿಕೊಡುತ್ತಿದೆ ಎಂಬುದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಲುಧಿಯಾನ ಕ್ಷೇತ್ರದ ಶಾಸಕರು ನಿಧನರಾಗಿರುವುದರಿಂದ ಉಪಚುನಾವಣೆಯಲ್ಲಿ ಅರವಿಂದ್​ ಕೇಜ್ರಿವಾಲ್​ ಅಲ್ಲಿಂದ ಸ್ಫರ್ಧಿಸಲಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕತ್ವವು ಈಗಾಗಲೇ ಎಲ್ಲವೂ ಸಿದ್ದಮಾಡಿಕೊಂಡಿದೆ.

Partap Singh Bajwa

ಒಂದು ವೇಳೆ ಅರವಿಂದ್​ ಕೇಜ್ರಿವಾಲ್​ ಏನಾದರು ಪಂಜಾಬ್​ ರಾಜಕೀಯಕ್ಕೆ ಪ್ರವೇಶಿಸಿದರೆ ಸಿಎಂ ಭಗವಂತ್​ ಮಾನ್​ ಬಣದಿಂದ ಅಧಿಕಾರಕ್ಕಾಗಿ ಆಂತರಿಕ ಕಚ್ಚಾಟ ಶುರುವಾಗಲಿದೆ. ಹೀಗಾಗಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದರೂ ಅಚ್ಚರಿಪಡಬೇಕಿಲ್ಲ ಎಂದು ಪಂಜಾಬ್ ವಿಧಾನಸಭೆ ವಿಪಕ್ಷ ನಾಯಕ ಪರತಾಪ್ ಸಿಂಗ್ ಬಾಜ್ವಾ ಹೇಳುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಹೊಸ ಚರ್ಚೆಯನ್ನ ಹುಟ್ಟುಹಾಕಿದ್ಧಾರೆ. 

ದೆಹಲಿಯಲ್ಲಿ ಸೋಲುಂಡಿರುವ ಅರವಿಂದ್​ ಕೇಜ್ರಿವಾಲ್​ ಒಂದು ವೇಳೆ ಪಂಜಾಬ್ ರಾಜಕೀಯಕ್ಕೆ ಪ್ರವೇಶಿಸಿ ಅಲ್ಲಿನ ಮುಖ್ಯಮಂತ್ರಿಯಾದಲ್ಲಿ ಭಗವಂತ್​ ಮಾನ್​ ಬೆಂಬಲಿಗರು ಹಾಗೂ ರಾಷ್ಟ್ರೀಯ ನಾಯಕರ ನಡುವಿನ ಭಿನ್ನಾಭಿಪ್ರಾಯಗಳು ಮತ್ತಷ್ಟು ಹೆಚ್ಚಾಗಬಹುದು. ವಿಪಕ್ಷ ನಾಯಕರ ಹೇಳಿಕೆಗೆ ರಾಜ್ಯ ಕಾಂಗ್ರೆಸ್​ (Congress) ನಾಯಕರು ಬೆಂಬಲ ಸೂಚಿಸಿದ್ದು, ಎಎಪಿ ವತಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಹಾಡಹಗಲೇ ವಿದ್ಯಾರ್ಥಿನಿಯನ್ನು Kidnap ಮಾಡಿದ ಯುವಕರು; ಆರೋಪಿಗಳ ಫೋಟೋ ರಿಲೀಸ್​, ವಿಡಿಯೋ ವೈರಲ್​

ಎರಡನೇ ಏಕದಿನ ಪಂದ್ಯದಿಂದ ಶ್ರೇಯಸ್​ ಅಯ್ಯರ್​ಗೆ ಕೊಕ್​? ಕೋಚ್ Gautam Gambhir ಸ್ಟ್ರಾಟರ್ಜಿ ವಿರುದ್ಧ ಮುಗಿಬಿದ್ದ ಫ್ಯಾನ್ಸ್

Share This Article

ನಿಮ್ಮ ಸಂಪತ್ತು ವೃದ್ಧಿಯಾಗಬೇಕಾ? ಅಕ್ಷಯ ತೃತೀಯದಂದು ಹೀಗೆ ಮಾಡಬೇಕು… Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಹಿಂದೂಗಳು ಬಹಳ ಪವಿತ್ರವೆಂದು ಪರಿಗಣಿಸುತ್ತಾರೆ. ಈ ಅಕ್ಷಯ ತೃತೀಯ…

ರಾತ್ರಿ ಏನೂ ತಿನ್ನದೆ ಮಲಗುತ್ತಿದ್ದೀರಾ? ಆದರೆ ನೀವು ಖಂಡಿತವಾಗಿಯೂ ಈ ವಿಷಯಗಳನ್ನು ತಿಳಿದುಕೊಳ್ಳಬೇಕು…Health Tips

Health Tips: ಇತ್ತೀಚೆಗೆ, ಅನೇಕ ಜನರು ಸಮಯದ ಅಭಾವ, ಹಸಿವಿನ ಅಭಾವ, ಉದ್ವೇಗ ಸೇರಿದಂತೆ ವಿವಿಧ…

ದಿನಾ ಒಂದು ಮೊಟ್ಟೆ ತಿನ್ನಿರಿ; ದೇಹದ ಸಕಾರಾತ್ಮಕ ಬದಲಾಣೆಗಳನ್ನು ಒಮ್ಮೆ ನೋಡಿ!: | Positive Changes

Positive Changes : ಮೊಟ್ಟೆಗಳನ್ನು ಪೋಷಕಾಂಶಗಳ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಇದು ಪ್ರೋಟೀನ್, ಜೀವಸತ್ವಗಳು ಮತ್ತು…