ಬೆಂಗಳೂರು: ತುರಹಳ್ಳಿ ಕಾಡು ಉಳಿಸಿ ಪ್ರತಿಭಟನಾ ಸ್ಥಳಕ್ಕೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಪ್ರತಿಭಟನಾ ನಿರತ ಹಲವು ಸಂಘಟನೆಗಳಿಂದ ಮನವಿ ಸ್ವೀಕರಿಸಿದ ಸಚಿವರು, ತುರಹಳ್ಳಿ ಕಾಡಿನಲ್ಲಿ ವೃಕ್ಷೋದ್ಯಾನ ನಿರ್ಮಾಣ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗುವುದು ಎಂದರು.
ಮುಂದಿನ ದಿನಗಳಲ್ಲಿ ಪಕ್ಕದ ವಿಧಾನಸಭಾ ಕ್ಷೇತ್ರಗಳ ಶಾಸಕರ ಅಭಿಪ್ರಾಯ ಪಡೆದು, ಸರ್ಕಾರದಲ್ಲಿ ಈ ಬಗ್ಗೆ ಚರ್ಚಿಸಿ ಬೆಂಗಳೂರು ಮಿಷನ್ 2022 ಯೋಜನೆಯಿಂದ ಕೈಬಿಡುವ ಬಗ್ಗೆ ಸರ್ಕಾರದ ಮುಂದಿಡಲಾಗುವುದು. ಈಗ ಸ್ಥಳೀಯರ ಅಭಿಪ್ರಾಯದಂತೆ ಕಾಡನ್ನು ಉಳಿಸಲು ಕ್ರಮವಹಿಸಲಾಗುವುದು ಎಂದರು.