ಜೈಪುರ: ರಾಜಸ್ಥಾನ ಕಾಂಗ್ರೆಸ್ನಲ್ಲಿ ದಿನದಿಂದ ಆಂತರಿಕ ಬಂಡಾಯ ಹೆಚ್ಚುತ್ತಿದ್ದು ತಮ್ಮದೇ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಸಚಿನ್ ಪೈಲಟ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಜೈಪುರದ ಶಹೀದ್ ಸ್ಮಾರಕದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅವರು ತಮ್ಮ ಬದ್ಧ ವೈರಿ ಅಶೋಕ್ ಗೆಹ್ಲೋಟ್ ಅವರನ್ನು ಈ ಮೂಲಕ ಸಿಕ್ಕಿಹಾಕಿಸಿ ಹೈಕಮಾಂಡಿಗೆ ಸಂದೇಶ ರವಾನೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಭ್ರಷ್ಟಾಚಾರ ಆರೋಪ
ಇನ್ನು ರಾಜಸ್ಥಾನದ ಮಾಜಿ ಸಿಎಂ ಬಿಜೆಪಿ ನಾಯಕಿ ವಸುಂಧರಾ ರಾಜೆ ಮುಖ್ಯಮಂತ್ರಿ ಆಗಿದ್ದ ವೇಳೆ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಧು ಸಚಿನ್ ಪೈಲಟ್ ಆರೋಪಿಸಿದ್ದರು. ಈ ಕುರಿತು ತನಿಖೆಗೆ ಆದೇಶಿಸಬೇಕು ಎಂದು ಮುಖ್ಯಮಂತ್ರಿ ಗೆಹ್ಲೋಟ್ ಮೇಲೆ ಒತ್ತಡ ಹೇರಿದ್ದರು.
ಇನ್ನು ಸಚಿನ್ ಪೈಲಟ್ ಮಾಡಿರುವ ಭ್ರಷ್ಟಾಚಾರ ಆರೋಪಗಳ ಕುರಿತು ಗೆಹ್ಲೋಟ್ ಅಷ್ಟಾಗಿ ತಲೆಕೆಡಿಸಿಕೊಂಡಿಲ್ಲ ಮತ್ತು ತನಿಖೆಗೆ ಆದೇಶಿಸಲು ನಿರಾಸಕ್ತಿ ತೋರುತ್ತಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಅಂದುಕೊಂಡಿದ್ದನ್ನು ಮಾಡುತ್ತೇನೆ ಅಂತ ಬೆತ್ತಲೆ ಫೋಟೋ ಶೇರ್ ಮಾಡಿದ ಜೇಮ್ಸ್ ಬಾಂಡ್ ನಟಿ!
ಕಠಿಣ ಕ್ರಮದ ಎಚ್ಚರಿಕೆ
ಇನ್ನು ಸಚಿನ್ ಪೈಲಟ್ ಉಪವಾಸ ಸತ್ಯಾಗ್ರಹ ಕುರಿತು ಪ್ರತಿಕ್ರಿಯಿಸಿರುವ ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಸುಖ್ಜಿಂದರ್ ಸಿಂಗ್ ರಾಂಧಾವ ಇದು ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿದ್ದು ಈ ರೀತಿಯ ವಿಚಾರಗಳನ್ನು ಪಕ್ಷದ ವೇದಿಕೆಗಳಲ್ಲಿ ಚರ್ಚಿಸಬೇಕು. ಇಂತಹ ವಿಚಾರವನ್ನು ಮಾಧ್ಯಮ ಹಾಗೂ ಸರ್ವಾಜನಿಕರ ಮುಂದೆ ಹೇಳುವುದು ಸರರಿಯಾದ ನಡೆಯಲ್ಲ.
ನಾನು ಕಳೆದ ಕೆಲ ತಿಂಗಳಿನಿಂದ ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು ಈ ಬಗ್ಗೆ ಪೈಲಟ್ ಅವರು ಎಂದಿಗೂ ನನ್ನ ಬಳಿ ಚರ್ಚಿಸಿಲ್ಲ. ಅವರು ಈಗಲೂ ಕೂಡ ನಮ್ಮ ಜೊತೆ ಚರ್ಚಿಸುವ ಬದಲು ಈ ರೀತಿಯ ನಿರ್ಧಾರಗಳನ್ನು ತೆಗೆದುಕೊಂಡರೆ ಪಕ್ಷಕ್ಕೆ ಹೆಚ್ಚು ನಷ್ಟವಾಗುತ್ತದೆ ಎಂದು ಹೇಳಿದ್ದಾರೆ.
ಒತ್ತಡ ಹೇರುವ ಯತ್ನ
ಇನ್ನು ಸಚಿನ್ ಪೈಲಟ್ ತಮ್ಮದೇ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡುತ್ತಿರುವುದು ಕಾಂಗ್ರೆಸ್ ಪಕ್ಷವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದು ನಾಯಕತ್ವ ಬದಲಾವಣೆ ಕುರಿತು ವರಿಷ್ಠರಿಗೆ ಈ ಮೂಲಕ ಒತ್ತಡ ಹೇರಲು ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.
ವರ್ಷಾಂತ್ಯದಲ್ಲಿ ವಿಧಾನಸಭೆ ಚುಣಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಕಳೆದ ಕೆಲವು ವರ್ಷಗಳಿಂದ ನಾಯಕತ್ವ ಬದಲಾವಣೆ ಕೂಗು ಜೋರಾಗಿ ಕೇಳಿ ಬರುತ್ತಿದ್ದು ಕಾಂಗ್ರೆಸ್ ಪಕ್ಷ ಹೇಗೆ ಡ್ಯಾಮೇಜ್ ಕಲಂಟ್ರೋಲ್ ಮಾಡಲಿದೆ ಎಂದು ಕಾದು ನೋಡಬೇಕಿದೆ.