More

    ಸಿಎಎ, ಎನ್​ಆರ್​ಸಿ ವಿರೋಧಿ ಪ್ರತಿಭಟನೆಯಲ್ಲಿ ಅಸಾದುದ್ದೀನ್​ ಓವೈಸಿ ಮತ್ತು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಭಾಗಿ: ಖಡಕ್​ ಎಚ್ಚರಿಕೆ ಕೊಟ್ಟ ಭಾಸ್ಕರ್​ ರಾವ್​

    ಬೆಂಗಳೂರು: ಇಂದು ಸಂಜೆ ಬೆಂಗಳೂರಿನಲ್ಲಿ ಸಿಎಎ ಮತ್ತು ಎನ್​ಆರ್​ಸಿ ವಿರೋಧಿಸಿ ಪ್ರತಿಭಟನೆ ನಡೆಯಲಿದ್ದು ಈ ಪ್ರತಿಭಟನೆಯಲ್ಲಿ ಸಂಸದ ಅಸಾದುದ್ದೀನ್​ ಓವೈಸಿ ಮತ್ತು ಮಾಜಿ ಪ್ರಧಾನಿ ಎಚ್​.ಡಿ.ದೇವೆಗೌಡರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್​ ಖಡಕ್​ ಎಚ್ಚರಿಕೆ ನೀಡಿದ್ದಾರೆ.

    ಸದಾ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ ಬಂದಿರುವ ಅಸಾದುದ್ದೀನ್​ ಓವೈಸಿ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿರುವುದರ ಕುರಿತಾಗಿ ಎಚ್ಚರಿಕೆ ನೀಡಿರುವ ಭಾಸ್ಕರ್​ ರಾವ್​, “ಎಲ್ಲರಿಗೂ ವಾಕ್​ ಸ್ವಾತಂತ್ರ್ಯ ಇದೆ. ವಾಕ್​ ಸ್ವಾತಂತ್ರ್ಯದ ಜತೆ ವಾಕ್​ ಜವಾಬ್ದಾರಿಯೂ ಇರಬೇಕು. ಪ್ರತಿಭಟನೆಯಲ್ಲಿ ಏನೇ ಸಂಭವಿಸಿದರೂ ಅದಕ್ಕೆ ಪ್ರತಿಭಟನೆಯ ಆಯೋಜಕರೇ ಹೊಣೆ” ಎಂದು ಹೇಳಿದ್ದಾರೆ.

    ಇಂದು ನಡೆಯಲಿರುವ ಪ್ರತಿಭಟನೆಗೆ ಎಲ್ಲಾ ರೀತಿಯ ಪೂರ್ವಭಾವಿ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts