ಬೆಂಗಳೂರು: ಇಂದು ಸಂಜೆ ಬೆಂಗಳೂರಿನಲ್ಲಿ ಸಿಎಎ ಮತ್ತು ಎನ್ಆರ್ಸಿ ವಿರೋಧಿಸಿ ಪ್ರತಿಭಟನೆ ನಡೆಯಲಿದ್ದು ಈ ಪ್ರತಿಭಟನೆಯಲ್ಲಿ ಸಂಸದ ಅಸಾದುದ್ದೀನ್ ಓವೈಸಿ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸದಾ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ ಬಂದಿರುವ ಅಸಾದುದ್ದೀನ್ ಓವೈಸಿ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿರುವುದರ ಕುರಿತಾಗಿ ಎಚ್ಚರಿಕೆ ನೀಡಿರುವ ಭಾಸ್ಕರ್ ರಾವ್, “ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ. ವಾಕ್ ಸ್ವಾತಂತ್ರ್ಯದ ಜತೆ ವಾಕ್ ಜವಾಬ್ದಾರಿಯೂ ಇರಬೇಕು. ಪ್ರತಿಭಟನೆಯಲ್ಲಿ ಏನೇ ಸಂಭವಿಸಿದರೂ ಅದಕ್ಕೆ ಪ್ರತಿಭಟನೆಯ ಆಯೋಜಕರೇ ಹೊಣೆ” ಎಂದು ಹೇಳಿದ್ದಾರೆ.
ಇಂದು ನಡೆಯಲಿರುವ ಪ್ರತಿಭಟನೆಗೆ ಎಲ್ಲಾ ರೀತಿಯ ಪೂರ್ವಭಾವಿ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್)