ಜೈಪುರ: ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ED) ನೋಟಿಸ್ ಜಾರಿ ಮಾಡಿದೆ.
ವಿದೇಶಿ ವಿನಿಮಯ ಕಾಯ್ದೆ (FEMA), 1999ರ ಅನ್ವಯ ಅಕ್ಟೋಬರ್ 27ರಂದು ಜೈಪುರ ಅಥವಾ ನವದೆಹಲಿಯಲ್ಲಿ ವಿಚಾರಣೆಗೆ ಹಾಜರಗುವಂತೆ ವೈಭವ್ ಗೆಹ್ಲೋಟ್ಗೆ ನೋಟಿಸ್ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ (ED) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚಿಗೆ ರಾಜಸ್ಥಾನ ಮೂಲದ ಹಾಸ್ಪಿಟಾಲಿಟಿ ಗ್ರೂಪ್ ಟ್ರಿಟಾನ್ ಹೋಟೆಲ್ಸ್ & ರೆಸಾರ್ಟ್ಸ್ ಪ್ರೈವೇಟ್ ಲಿಮಿಟೆಡ್ ಮೇಲೆ ನಡೆದ ED ದಾಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ವೈಭವ್ ಗೆಹ್ಲೋಟ್ಗೆ ನೋಟಿಸ್ ಜಾರಿ ಮಾಡಲಾಗಿದೆ.
ಇದನ್ನೂ ಓದಿ: ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ; ಮಗು ಸೇರಿದಂತೆ 12 ಮಂದಿ ಮೃತ್ಯು
ಚುನಾವಣೆಯ ಹೊಸ್ತಿಲಲ್ಲಿ ಕೆಂದ್ರದಲ್ಲಿರುವ ಬಿಜೆಪಿ ಸರ್ಕಾರ ಈ ರೀತಿ ದಾಳಿ ಮಾಡಿಸುವ ಮೂಲಕ ನಮ್ಮ ಧ್ವನಿಯನ್ನು ಹತ್ತಿಕ್ಕಲು ನೋಡುತ್ತಿದೆ. ನಿನ್ನೆ ಕಾಂಗ್ರೆಸ್ ಭರವಸೆ ನೀಡಿದೆವು ಇಂದು ರಾಜ್ಯ ಘಟಕದ ಅಧ್ಯಕ್ಷರ ಮನೆ ಮೇಲೆ ದಾಳಿ ಮಾಡಲಾಗಿದೆ. ನಾಳೆ ನನ್ನ ಮಗನಿಗೆ ವಿಚಾರಣೆಗೆ ಹಾಜರಗುವಂತೆ ನೋಟಿಸ್ ನೀಡಲಾಗಿದೆ. ರಾಜಸ್ಥಾನದಲ್ಲಿ ನಾವು ಮತ್ತೊಮ್ಮೆ ಗೆಲ್ಲುತ್ತೇವೆ ಎಂದು ಅರಿತಿರುವ ಬಿಜೆಪಿ ಜನರ ಮನಸ್ಸನ್ನು ಗೆಲ್ಲಲಾಗದೆ ಈ ರೀತಿ ಮಾಡುತ್ತಿದೆ ಎಂದು ಸಿಎಂ ಅಶೋಕ್ ಗೆಹ್ಲೋಟ್ ಕಿಡಿಕಾರಿದ್ದಾರೆ.
ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.