ಕೊಡಗು: ಗುಂಡು ಹಾರಿಸಿಕೊಂಡು ನಿವೃತ್ತ ಎಎಸ್ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರಪೇಟೆ ತಾಲೂಕಿನ ಮಾದೇಗೋಡು ಗ್ರಾಮದಲ್ಲಿ ನಡೆದಿದೆ.
ನಿವೃತ್ತಿಯಾದ ಒಂದೇ ತಿಂಗಳಲ್ಲಿ ಆತ್ಮಹತ್ಯೆಗೆ ನಿವೃತ್ತ ಎಎಸ್ಐ ಎಂ.ಎಸ್. ಈರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇ.30 ರಂದು ನಿವೃತ್ತಿಯಾಗಿದ್ದರು. ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಚಿನ್ನಾಭರಣಕ್ಕಾಗಿ ದುಷ್ಕರ್ಮಿಗಳಿಂದ ಹೀನಾಯ ಕೃತ್ಯ!
ಈರಪ್ಪ ಅವರು ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದರು. ಮಂಗಳವಾರ ಮುಂಜಾನೆ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)
ಪತಂಜಲಿಯಿಂದ “ಕೊರೊನಿಲ್” ಔಷಧ ಬಿಡುಗಡೆ: ನೂರಕ್ಕೆ ನೂರು ಗುಣಪಡಿಸುವ ಭರವಸೆ!