“ಅಸ್ಸಾಂನ ಜನ ಬಿಜೆಪಿ ಸರ್ಕಾರದ ಪ್ರಯೋಜನ ಅರಿತಿದ್ದಾರೆ”

blank

ನವದೆಹಲಿ : ಅಸ್ಸಾಂನಲ್ಲಿ ಬಿಜೆಪಿ ಗೆಲುವಿನತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಹಾಗೂ ಈಶಾನ್ಯ ಪ್ರದೇಶ ಅಭಿವೃದ್ಧಿ ಸಚಿವರಾದ ಡಾ. ಜಿತೇಂದ್ರ ಸಿಂಗ್​ ಅಸ್ಸಾಂ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ. ಬಿಜೆಪಿಗೆ ಭಾರೀ ಗೆಲುವು ಲಭಿಸಲು ರಾಜ್ಯದ ಜನರು ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ಬಿಜೆಪಿ ಅಧಿಕಾರದಲ್ಲಿರುವುದರಿಂದ ಆಗುವ ಪ್ರಯೋಜನವನ್ನು ಅರಿತಿದ್ದಾರೆ. ಅದಕ್ಕಾಗೇ ಮತ್ತೆ ನಮ್ಮ ಪಕ್ಷವನ್ನು ಚುನಾಯಿಸಿದ್ದಾರೆ ಎಂದಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಆಡಳಿತದ ಬಗ್ಗೆ ಮಾತನಾಡಿರುವ ಸಿಂಗ್, “ಕಳೆದ 7 ವರ್ಷಗಳಲ್ಲಿ ಅಸ್ಸಾಂ ಕ್ರಾಂತಿಕಾರಿ ಪರಿವರ್ತನೆಯನ್ನು ಕಂಡಿದೆ. ಮುಂಚೆ, ರಾಜ್ಯವು ಯಾವಾಗಲೂ ಗಡಿ ನುಸುಳುವಿಕೆ, ಆತಂಕವಾದಿಗಳ ಅಬ್ಬರ ಅಥವಾ ಅರ್ಧಕ್ಕೆ ನಿಂತುಹೋದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸುದ್ದಿಯಲ್ಲಿರುತ್ತಿತ್ತು. ಆದರೆ ಈಗ ಈ ಎಲ್ಲ ವಿಷಯದಲ್ಲೂ ಬದಲಾವಣೆ ಆಗಿದೆ” ಎಂದಿದ್ದಾರೆ. (ಏಜೆನ್ಸೀಸ್)

ಬಂಗಾಳ ಗೆದ್ದ ದೀದಿಗೆ ಶುಭಾಶಯ ಕೋರಿದ ಬಿಜೆಪಿ ಸಚಿವರು

ಮದುವೆ ಮಂಟಪ ದಾಳಿ : ಎರ್ರಾಬಿರ್ರಿ ವರ್ತಿಸಿದ ಡಿಎಂ ಸಸ್ಪೆಂಡ್

Share This Article

ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits

fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…