More

    ಮಸೀದಿ ಬಳಿ ಕರಪತ್ರ ಹಂಚುತ್ತಿದ್ದ ಜೆಡಿಎಸ್ ಅಭ್ಯರ್ಥಿ ಮೇಲೆ ಹಲ್ಲೆ ಯತ್ನ?

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ದಿನಗಣನೆ ನಡೆಯುತ್ತಿರುವುದರಿಂದ ಪ್ರಚಾರ ಕಾವೇರಿದೆ. ಎಲ್ಲ ಪ್ರಮುಖ ಪಕ್ಷಗಳ ನಾಯಕರು ತರಾತುರಿಯ ಪ್ರಚಾರದಲ್ಲಿ ತೊಡಗಿದ್ದು, ಮತ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದೆ. ಈ ನಡುವೆ ಅಭ್ಯರ್ಥಿಯೊಬ್ಬರ ಮೇಲೆ ಹಲ್ಲೆ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

    ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿ.ಗೋವಿಂದರಾಜು ಅವರ ಮೇಲೆ ಈ ಹಲ್ಲೆ ನಡೆದಿದೆ ಎನ್ನಲಾಗುತ್ತಿದೆ. ಇಂದು ಶುಕ್ರವಾರವಾದ್ದರಿಂದ ಮಸೀದಿ ಬಳಿ ಪ್ರಚಾರಕ್ಕೆ ತೆರಳಿ ಕರಪತ್ರ ಹಂಚುತ್ತಿರುವಾಗ ಹಲ್ಲೆ ಯತ್ನ ನಡೆದಿದೆ ಎಂದು ಆರೋಪ ಮಾಡಲಾಗಿದೆ.

    ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ರೂ. ಕಳೆದುಕೊಂಡು ನಿಮ್ಹಾನ್ಸ್​ಗೆ ಹೋದ ಉದ್ಯಮಿ!

    ಕಾರ್ಯಕರ್ತರೊಂದಿಗೆ ತೆರಳಿದ್ದ ಅಭ್ಯರ್ಥಿ ಅಲ್ಲಿ ಕರಪತ್ರ ಹಂಚಿ ಪ್ರಚಾರದಲ್ಲಿ ತೊಡಗಿ ಮತ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದಾಗ, ಇಲ್ಲೇಕೆ ಬಂದಿದ್ದೀರಿ ಎಂದು ಒಂದಷ್ಟು ಮಂದಿ ಪ್ರಶ್ನಿಸಿದ್ದಾರೆ. ‘ಕಾಂಗ್ರೆಸ್​ನವರು ಮಸೀದಿ ಕಟ್ಟಿದ್ದು, ನೀವು ಯಾಕೆ ಬಂದಿದ್ದೀರಾ?’ ಎಂದು ಪ್ರಶ್ನೆ ಮಾಡಿದ್ದ ಕೆಲವರು ಬಳಿಕ ಕೆಲವರು ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ್ದರು ಎಂದು ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಗೋವಿಂದರಾಜು ದೂರು ನೀಡಿದ್ದಾರೆ.

    ಇದು ಡೈವೋರ್ಸ್ ಫೋಟೋಶೂಟ್​: ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts