More

    ಬೆಂಗಳೂರು: ತುಂಬು ಗರ್ಭಿಣಿ ಮೇಲೆ ಹಲ್ಲೆ; ಹೊಟ್ಟೆಯಲ್ಲೇ ಸಾವನ್ನಪ್ಪಿದ ಕಂದಮ್ಮ

    ಬೆಂಗಳೂರು: ತುಂಬು ಗರ್ಭಿಣಿ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಗೋವಿಂದರಾಜನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬಲವಾದ ಪೆಟ್ಟು ಬಿದ್ದ ಪರಿಣಾಮ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿದೆ.

    ಜಯಶೀಲಾ ಎಂಬ ಗರ್ಭಿಣಿಗೆ ಆರೋಪಿಗಳು ಒದ್ದು ಹಲ್ಲೆ ಮಾಡಿದ್ದಾರೆ. ಪದ್ಮಮ್ಮ, ಕಾವ್ಯ ಎಂಬುವವರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಈ ಅಮಾನವೀಯ ಘಟನೆ ಸಂಭವಿಸಿದೆ.

    ಜಯಶೀಲಾ ಹೋಟೆಲ್​​​​​​ಗೆ ಬಂದಾಗ ಗಲಾಟೆಯಾಗಿತ್ತು. ಆಗ ಗಲಾಟೆ ಬೇಡವೆಂದು ರಾಜಿ ಮಾಡಿಕೊಂಡಿದ್ದಾರೆ. ಆದರೆ ರಾಜಿ ಬಳಿಕ ಮತ್ತೆ ಗರ್ಭಿಣಿ ಮೇಲೆ ಆರೋಪಿಗಳು ಮತ್ತೆ ಹಲ್ಲೆ ನಡೆಸಿದ್ದಾರೆ. ಗರ್ಭಿಣಿ ಎಂಬುದನ್ನು ನೋಡದೇ ಒದ್ದು ಹಲ್ಲೆ ಮಾಡಿದ್ದಾರೆ. ಈ ವೇಳೆ ಹೊಟ್ಟೆಗೆ ಗಂಭೀರ ಪೆಟ್ಟು ಬಿದ್ದಿದೆ.

    ಘಟನೆಯ ಸಂಬಂಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಗಳ ವಿಚಾರಣೆಗೆ ಮುಂದಾಗಿದ್ದಾರೆ. 

    ಶಿವಪುರಿ ಅರಣ್ಯದಲ್ಲಿ ಭಾರೀ ಸಂಖ್ಯೆಯ ಹಸುಗಳ ಮೃತದೇಹಗಳು ಪತ್ತೆ; ಮೌನ ವಹಿಸಿದ ಅರಣ್ಯ ಇಲಾಖೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts