ಬೆಂಗಳೂರು: ಸಂಗೀತ ನಿರ್ದೇಶಕ, ಡಾ.ಕಿರಣ್ ತೋಟಂಬೈಲ್ ಅವರ ಮೇಲೆ ದುಷ್ಕರ್ಮಿಗಳು ರಾಡ್ನಿಂದ ಹಲ್ಲೆ ಮಾಡಿದ್ದು, ಅವರ ತಲೆಗೆ ಗಾಯವಾಗಿದೆ. ನಿನ್ನೆ ತಡರಾತ್ರಿ ಈ ಪ್ರಕರಣ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡಾ.ಕಿರಣ್ ಅವರು ನಿನ್ನೆ ಸಂಚಾರಿ ವಿಜಯ್ ಅವರ ಜನ್ಮದಿನ ಪ್ರಯುಕ್ತ ಬೆಂಗಳೂರಿನ ರಾಜರಾಜೇಶ್ವರಿನಗರದ ಗೆಳೆಯರ ಮನೆಯಲ್ಲಿ ‘ಉಸಿರು’ ತಂಡ ಆಯೋಜಿಸಿದ್ದ ಸಮಾರಂಭದಲ್ಲಿ ಪಾಲ್ಗೊಂಡು ಮರಳುತ್ತಿರುವಾಗ ಈ ಘಟನೆ ನಡೆದಿದೆ. ತಡರಾತ್ರಿ 2.30ರ ಸುಮಾರಿಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬಂದ ಐವರು ಸರಳಿನಿಂದ ಹಲ್ಲೆ ಮಾಡಿದ್ದಾರೆ. ಪರಿಣಾಮವಾಗಿ ಕಿರಣ್ ಅವರ ತಲೆಯ ಹಿಂದೆ ಗಾಯವಾಗಿದೆ.
ಘಟನೆಗೆ ಕಾರಣವೇನು ಎಂಬುದು ಇನ್ನೂ ಖಚಿತವಾಗಿಲ್ಲ. ಪ್ರಕರಣ ಸಂಬಂಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಡಾ.ಕಿರಣ್ ಅವರು ಆರ್.ಚಂದ್ರು ನಿರ್ದೇಶನದ ‘ಐ ಲವ್ ಯೂ’ ಸಿನಿಮಾಗೆ ಸಂಗೀತ ಸಂಯೋಜಿಸಿದ್ದರು.
ಟೆನ್ಷನ್ ಬಿಡಿ, ಪರೀಕ್ಷೆ ಬರೆಯಿರಿ: ಎರಡೇ ಪ್ರಶ್ನೆಪತ್ರಿಕೆಗಳಲ್ಲಿ 6 ವಿಷಯಗಳು; ಉತ್ತರಕ್ಕೆ ಒಎಂಆರ್ ಶೀಟ್ ಬಳಕೆ
ಪ್ರವಾಸಿಗರೇ ಎಚ್ಚರ.. ಇಲ್ಲಿ ಮಾಸ್ಕ್ ಧರಿಸದಿದ್ದರೆ 5 ಸಾವಿರ ರೂ. ದಂಡ ಇಲ್ಲವೇ 8 ದಿನ ಜೈಲುಶಿಕ್ಷೆ!