ಕರ್ತವ್ಯನಿರತ ಪಿಎಸ್‌ಐ ಮೇಲೆ ಹಾಡಹಗಲೇ ಮಾರಣಾಂತಿಕ ಹಲ್ಲೆ

ಬೆಂಗಳೂರು: ಯಶವಂತಪುರದಲ್ಲಿ ಕರ್ತವ್ಯನಿರತ ಪಿಎಸ್‌ಐ ಮೇಲೆ ದ್ವಿಚಕ್ರ ವಾಹನ ಸವಾರನೊಬ್ಬ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಶ್ರೀರಾಂಪುರ ಠಾಣೆ ಪಿಎಸ್‌ಐ ಸರ್ಫುದ್ದೀನ್ ಹಲ್ಲೆಗೊಳಗಾದವರು. ತಲೆಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಎಸ್‌ಐ ಸರ್ಫುದ್ದೀನ್ ಭಾನುವಾರ ಮಧ್ಯಾಹ್ನ 12.15ರಲ್ಲಿ ಪ್ರಕರಣವೊಂದರ ತನಿಖೆಗಾಗಿ ಯಶವಂತಪುರದ ಆರ್‌ಟಿಒ ಕಚೇರಿ ಬಳಿ ಮಫ್ತಿಯಲ್ಲಿ ಬಂದಿದ್ದರು. ಈ ವೇಳೆ ಆರೋಪಿ ಉದಯ್ ಕುಮಾರ್, ತನ್ನ ತಂದೆ ನಡೆಸುತ್ತಿದ್ದ ಹೋಟೆಲ್ ಎದುರು ನಿಂತುಕೊಂಡಿದ್ದ ದ್ವಿಚಕ್ರ ವಾಹನದಲ್ಲಿ ಪಿಎಸ್‌ಐ ಸರ್ಫುದ್ದೀನ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದ. ಅದನ್ನು ಪಿಎಸ್‌ಐ ಪ್ರಶ್ನಿಸಿದ್ದರು. … Continue reading ಕರ್ತವ್ಯನಿರತ ಪಿಎಸ್‌ಐ ಮೇಲೆ ಹಾಡಹಗಲೇ ಮಾರಣಾಂತಿಕ ಹಲ್ಲೆ