ಹಿಜಾಬ್​ ಸಂಘರ್ಷ: ಶಿಕ್ಷಕರ ಮೇಲೆಯೇ ಕಬ್ಬಿಣದ ರಾಡ್​ನಿಂದ ಹಲ್ಲೆ!

ಬಾಗಲಕೋಟೆ: ಹಿಜಾಬ್​ ಧರಿಸಿ ತರಗತಿಗೆ ಹಾಜರಾಗುವ ಕುರಿತು ಭುಗಿಲೆದ್ದಿರುವ ವಿವಾದ-ಸಂಘರ್ಷ ಇದೀಗ ಹಿಂಸಾತ್ಮಕ ರೂಪಕ್ಕೆ ತಿರುಗಲಾರಂಭಿಸಿದೆ. ಹಿಜಾಬ್ ಸಂಬಂಧಿಸಿದ ಗಲಾಟೆ ಸಂದರ್ಭದಲ್ಲಿ ಶಿಕ್ಷಕರೊಬ್ಬರ ಮೇಲೆಯೇ ಕಬ್ಬಿಣದ ರಾಡ್​ನಿಂದ ಹಲ್ಲೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜ್​ನಲ್ಲಿ ನಡೆದ ಹಿಜಾಬ್ ಸಂಘರ್ಷದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಬನಹಟ್ಟಿ ಖಾಸಗಿ ಶಾಲೆಯ ಶಿಕ್ಷಕ ಮಂಜುನಾಥ ನಾಯಕ (30) ಹಲ್ಲೆಗೊಳಗಾಗಿದ್ದಾರೆ. ಹಿಜಾಬ್ ವಿವಾದ ತಾರಕಕ್ಕೆ ಏರಿದ್ದರಿಂದ ಪ್ರಕ್ಷುಬ್ಧ ಸ್ಥಿತಿಯಲ್ಲಿ ಇರುವ … Continue reading ಹಿಜಾಬ್​ ಸಂಘರ್ಷ: ಶಿಕ್ಷಕರ ಮೇಲೆಯೇ ಕಬ್ಬಿಣದ ರಾಡ್​ನಿಂದ ಹಲ್ಲೆ!